ಕವನ : ದೀಪಾವಳಿ

Must Read

ದೀಪಾವಳಿ

ಸಾಲು ಸಾಲು
ದೀಪಗಳು
ಕಣ್ಣುಗಳು ಕೋರೈಸಲು
ಒಳಗಣ್ಣು ತೆರೆದು
ನೋಡಲು
ಜೀವನದ ಮರ್ಮ
ಕರ್ಮ ಧರ್ಮಗಳನು
ಅರಿಯಲು
ಸಾಲು ಸಾಲು
ದೀಪಗಳು
ಮೌಢ್ಯವ ಅಳಿಸಲು
ಜ್ಞಾನವ ಉಳಿಸಿ
ಬೆಳೆಸಲು
ಸಾಲು ಸಾಲು
ದೀಪಗಳು
ಮನೆಯನು ಬೆಳಗಲು
ಮನವನು ತೊಳೆಯಲು
ಸಾಲು ಸಾಲು
ದೀಪಗಳು
ನಮ್ಮ ನಿಮ್ಮ
ಎಲ್ಲರ ಮನೆ
ಹಾಗೂ ಮನವನು
ಬೆಳಗಲಿ
ಮಾನವೀಯತೆಯ
ಜ್ಯೋತಿ ಎಲ್ಲೆಡೆ
ಪಸರಿಸಲಿ
ಶುಭ ದೀಪಾವಳಿ 🌹

ಡಾ. ಜಯಾನಂದ ಧನವಂತ

Latest News

ಗಾರ್ಡನ್ ಅಭಿವೃದ್ದಿಗೆ  ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ

ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨...

More Articles Like This

error: Content is protected !!
Join WhatsApp Group