ಕವನ : ಗಾಂಧಿನೇಕೆ ಕೊಂದರು ?

Must Read

ಗಾಂಧಿನೇಕೆ ಕೊಂದರು ?

ಸತ್ಯ ಶಾಂತಿ ನ್ಯಾಯ ಮೂರ್ತಿ
ಗಾಂಧಿನೇಕೆ ಕೊಂದರು ?
ಎಷ್ಟೋ ವರುಷಗಳ ಹಿಂದೆ
ನನ್ನ ಮುಗ್ಧ ಮಗನ ಪ್ರಶ್ನೆಯು

ದಶಕ ಕಳೆಯಿತು ಉತ್ತರ ಹುಡುಕಲು
ಕೊನೆಗೂ ಸಿಕ್ಕಿತು ಕಾರಣ
ಬಿಚ್ಚಿ ಹೇಳಿದೆ ನನ್ನ ಮಗನಿಗೆ
ನಿಜದ ನಿಲುವಿನ ಹೂರಣ

ಬಾಪು ಸರಳ ಸಮತೆ ಪ್ರಿಯ
ಕೈಗೆ ಕೊಟ್ಟನು ಸ್ವಾತಂತ್ರ
ದಾಸ್ಯ ತೊಲಗಿಸಿ ದೇಸಿ ಚರಕ
ನೂಲು ನೂತನು ಭಾರತ

ಸುಳ್ಳು ಎಂದೂ ಹೇಳಲಿಲ್ಲ
ಕೋಮು ಗಲಭೆ ಮಾಡಲಿಲ್ಲ
ಜಾತಿ ಧರ್ಮದ ದ್ವೇಷ ಬೆಂಕಿಗೆ
ತುಪ್ಪವನ್ನು ಸುರಿಯಲಿಲ್ಲ

ಗಣಿ ಲೂಟಿ ಹೊಡೆಯಲಿಲ್ಲ
ದೇಶ ಬಿಟ್ಟು ಓಡಲಿಲ್ಲ
ಸುಳ್ಳು ಲೆಕ್ಕದಿ ದುಡ್ಡು ತಿಂದು
ದೊಡ್ಡ ಬಂಗಲೆ ಕಟ್ಟಲಿಲ್ಲ

ರೈತರನ್ನು ಕೊಲ್ಲಲಿಲ್ಲ
ಶ್ರಮಿಕ ಜನರನು ತುಳಿಯಲಿಲ್ಲ
ನಿರುದ್ಯೋಗ ನಿತ್ಯ ತಾಂಡವ
ಕೆರೆಗೆ ಯುವಕರ ನೂಕಲಿಲ್ಲ

ಧರ್ಮ ದೇವರ ಹೆಸರಿನಲ್ಲಿ
ಮೋಸ ಮಾಡಿ ಮೆರೆಯಲಿಲ್ಲ
ಮೌಲ್ಯ ಮೆಟ್ಟಿ ನೆಲದಿ ಹೂತು
ಖುರ್ಚಿ ಗದ್ದುಗೆ ಏರಲಿಲ್ಲ

ಗುಂಡು ಹೊಡೆದರೂ
ಸತ್ಯ ಹೇಳಿದ ನಮ್ಮ
ದೇಶದ ಮೋಹನ
ಗಾಂಧಿ ಮಂತ್ರವೇ ಪಾವನ
—————————————–
ಡಾ.ಶಶಿಕಾಂತ ಪಟ್ಟಣ ರಾಮದುರ್ಗ

LEAVE A REPLY

Please enter your comment!
Please enter your name here

Latest News

ಪ್ರಕೃತಿ ಮತ್ತು ಪ್ರೀತಿಯ ಅದ್ಭುತ ಸಂಗಮ: ಮೇಘದೂತದ ಮಹತ್ವ ವಿವರಿಸಿದ ಪ್ರೊ. ನಾರಾಯಣಘಟ್ಟ

    ಕಾಳಿದಾಸನ ಮೇಘದೂತ ಪ್ರಕೃತಿ ಹಾಗೂ ಶುದ್ಧ ಪ್ರೀತಿಯ ಅದ್ಭುತ ಕಾವ್ಯವಾಗಿದ್ದು, ವಿದ್ಯಾರ್ಥಿಗಳು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರೊ. ನಾರಾಯಣಘಟ್ಟ ಹೇಳಿದರು. ...

More Articles Like This

error: Content is protected !!
Join WhatsApp Group