spot_img
spot_img

ಕವನ ; ಕೆನೆಯಾದ ಭಾವ

Must Read

- Advertisement -

ಕೆನೆಯಾದ ಭಾವ

ಹಾಲು ಹೃದಯದ ತುಂಬ
ಹರಿದ ನಿನ್ನ ಪ್ರೀತಿಯ
ಸ್ನೇಹ ಪರಿಮಳ ಭಾವವು…
ಸವಿ ಸಕ್ಕರೆಯಾಗಿ ಮನ
ಅಕ್ಕರೆಯಲಿ ಕರಗಿ
ಒಂದಾಗಿ ಮಧುರ ಜೀವವು…

ಎದೆ ಕಡಲಲಿ ಹೊಮ್ಮಿ
ಹಾಡುವ ನೀನು ಬರೆದ
ನೂರು ಕವನದಲೆಗಳು..
ಮೌನವಾಗಿ ಮಾತು ಮರೆತು
ಹೆಪ್ಪುಗಟ್ಟಿವೆ ಉಪ್ಪು ನೀರ
ನೋವ ಒಡಲಲಿ ಒಲವದು…

- Advertisement -

ಸಾವಿರ ಮಾತಿನ ಬಾಣ
ತೂರಿ ಹೃದಯ ಗಾಯ
ಕುದಿವ ಕಡಲ ಆಗರ…
ಮುಚ್ಚಿದೆದೆಯ ಕದವ
ತೆರೆಯದ ಕಲ್ಲು ಹೃದಯ
ನಡುಗಿತು ಭಾವ ಸಾಗರ.

ಬಿತ್ತಿದ ಭಾವ ಬೀಜ
ಮೊಳೆತು ಚಿಗುರು ಪರಿಮಳ..
ಕುದಿದು ಮರಳಿ ಹೊರಳಿ
ಶಶಿಕಿರಣ ಬೆಳಕ ಬೆರಗು
ಪದರ ಸವಿಯ ಕವಿ ಜೀವ
ಕೆನೆಗಟ್ಟಿದ ಭಾವ ಸೆರಗು….

ಇಂದಿರಾ ಮೋಟೆಬೆನ್ನೂರ. ಬೆಳಗಾವಿ

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ತಲೆಬಾಗು ಗುರುಗಳಿಗೆ ಗಣ್ಯರಿಗೆ ಮಾನ್ಯರಿಗೆ ಶಿರಬಾಗು ಹಿರಿಯರಿಗೆ ಹೆತ್ತವರಿಗೆ ಶರಣಾಗು ಸಂಪೂರ್ಣ ಮದವಳಿದು ದೈವಕ್ಕೆ ಬಾಗಿದವ ಬಾಳುವನು - ಎಮ್ಮೆತಮ್ಮ ಶಬ್ಧಾರ್ಥ ಗಣ್ಯರು = ಗಣನೀಯವಾದವರು ಮಾನ್ಯರು = ಮನ್ನಣೆಗೆ ಪಾತ್ರರಾದವರು ತಾತ್ಪರ್ಯ ಗುರುಗಳಲ್ಲಿ‌ ಗಣ್ಯರಲ್ಲಿ‌ ಮಾನ್ಯರಲ್ಲಿ‌‌...
- Advertisement -

More Articles Like This

- Advertisement -
close
error: Content is protected !!
Join WhatsApp Group