ಕವನ ; ಕೆನೆಯಾದ ಭಾವ

Must Read

ಕೆನೆಯಾದ ಭಾವ

ಹಾಲು ಹೃದಯದ ತುಂಬ
ಹರಿದ ನಿನ್ನ ಪ್ರೀತಿಯ
ಸ್ನೇಹ ಪರಿಮಳ ಭಾವವು…
ಸವಿ ಸಕ್ಕರೆಯಾಗಿ ಮನ
ಅಕ್ಕರೆಯಲಿ ಕರಗಿ
ಒಂದಾಗಿ ಮಧುರ ಜೀವವು…

ಎದೆ ಕಡಲಲಿ ಹೊಮ್ಮಿ
ಹಾಡುವ ನೀನು ಬರೆದ
ನೂರು ಕವನದಲೆಗಳು..
ಮೌನವಾಗಿ ಮಾತು ಮರೆತು
ಹೆಪ್ಪುಗಟ್ಟಿವೆ ಉಪ್ಪು ನೀರ
ನೋವ ಒಡಲಲಿ ಒಲವದು…

ಸಾವಿರ ಮಾತಿನ ಬಾಣ
ತೂರಿ ಹೃದಯ ಗಾಯ
ಕುದಿವ ಕಡಲ ಆಗರ…
ಮುಚ್ಚಿದೆದೆಯ ಕದವ
ತೆರೆಯದ ಕಲ್ಲು ಹೃದಯ
ನಡುಗಿತು ಭಾವ ಸಾಗರ.

ಬಿತ್ತಿದ ಭಾವ ಬೀಜ
ಮೊಳೆತು ಚಿಗುರು ಪರಿಮಳ..
ಕುದಿದು ಮರಳಿ ಹೊರಳಿ
ಶಶಿಕಿರಣ ಬೆಳಕ ಬೆರಗು
ಪದರ ಸವಿಯ ಕವಿ ಜೀವ
ಕೆನೆಗಟ್ಟಿದ ಭಾವ ಸೆರಗು….

ಇಂದಿರಾ ಮೋಟೆಬೆನ್ನೂರ. ಬೆಳಗಾವಿ

Latest News

ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು

ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...

More Articles Like This

error: Content is protected !!
Join WhatsApp Group