ಕವನ : ಅನಾಥರ ನಾಥ

Must Read

ಅನಾಥರ ನಾಥ

ಅಬಲ ಅಶಕ್ತ
ಅಸ್ಪ್ರಶ್ಯ ಅನಾಥ
ಅನಾಥರ ನಾಥ
ಸಂಗಮನಾಥ
ಹೇ ಬಸವೇಶ್ವರ
ಒಳಗೊಳಗೆ ಬೆಂದ
ಶತಮಾನದ ಅಸಮತೆ
ಜಾತಿ ವರ್ಗ ವರ್ಣ
ಕಿತ್ತೆಸೆದೆ ವೀರ
ಶಾಂತಿ ಪ್ರೀತಿಗೆ
ಜೀವ ತೇಯ್ದ ಯೋಧ
ಕೊನೆಗೊಳಿಸಿದೆ
ಸನಾತನಿಗಳ ವಾದ
ಇಲ್ಲವಾದವು
ವೇದ ಆಗಮ ಪುರಾಣ
ಶಾಸ್ತ್ರ ಶಕುನ ಮುಹೂರ್ತವು
ಅಕ್ಷರ ಕಲಿಸಿ
ವಚನ ರಚಿಸಿ
ಬಟ್ಟೆಯಾದಿ ದೇವಲೋಕಕೆ
ಶ್ರಮದ ಬೆವರೆ
ಪುಣ್ಯ ತೀರ್ಥ
ಹಂಚಿ ತಿಂದರೆ ಸ್ವರ್ಗವು
ಕಟ್ಟಿಕೊಟ್ಟೆ ಮುಕ್ತ ಸಮಾಜವ
ನಾವು ಬದುಕಲಾರದ ಹೇಡಿಯು
ನಿನ್ನ ಸ್ಮರಣೆ ನಿತ್ಯ ಮಂತ್ರ
ಲಿಂಗವಂತ ಸ್ವತಂತ್ರರು..
ಸತ್ಯ ಹಾದಿ ಹುಡಕಲಿರುವ
ಬಸವ ಭಕ್ತರು ಶ್ರೇಷ್ಠರು.
————————————–
ಡಾ.ಶಶಿಕಾಂತ.ಪಟ್ಟಣ. ರಾಮದುರ್ಗ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group