ಕವನ : ಕೊರಡು ಕೊನರಲು

Must Read

ಕೊರಡು ಕೊನರಲು

ನೀನೊಲಿದಾಗಲೇ ನಾ ಬೀಜ ಮೊಳೆತು ನವಿರಾಗಿ ಚಿಗುರಿದ್ದು ಹಚ್ಚ ಹಸಿರಿನ ವೈಶಾಲ್ಯತೆಯಲಿ
ಬೆಳೆದು ಮರವಾಗಿ ನೆರಳು
ಹೂ ಹಣ್ಣು ಕಾಯಿ ನೀಡಿದ್ದು//

ನೀನೊಲಿದಾಗಲೇ ನಾ ಸಸಿ
ಬಲಿತು ಹೆಮ್ಮರವಾಗಿದ್ದು
ಅಂಗಳದ ತುಂಬೆಲ್ಲಾ ಟೊಂಗೆ
ಪಂಗ ಪಂಗಳವಾಗಿ ಹರಡಿ
ಬಿಸಿಲ ಝಳಕೆ ತಂಪಾಗಿದ್ದು//

ನಿನ್ನೊಲುಮೆಯ ಮರೆತ
ಧೂರ್ತ ಹುಲು ಮಾನವನೀಗ
ನನ್ನಿರವ ಬುಡ ಕಡಿದಾಗ ನಾ
ಬರೀ ಒಣಗಿದ ಕೊರಡಾಗಲು
ಮಾಡುವದು ಇನ್ನೇನು?//

ಸುತ್ತ ಚೆಲ್ಲಿದ ಹಸಿ ಮಣ್ಣಿನ
ಪಸೆಯ ಹೀರುತ ಬದುಕಲು
ಬೇರುಗಳ ಹರಡಿ ಗುಪ್ತ ಜಲದ ಸೆಲೆಯ ಹುಡುಕುತಲಿ ಮತ್ತೆ ಮೋಡ ಮಳೆಗಾಗಿ ಕಾದಿರುವೆ//

ಕೊನರಲೇಬೇಕು ಕೊರಡು
ಬದುಕುವದು ಸುಲಭವಲ್ಲ  ಕೊನೆಯಾಸೆ ಈ ಬಡ ಜೀವಕೆ
ತಿಳಿದವರು ನಾಲ್ಕು ಹನಿ
ಕಣ್ಣೀರಾದರೂ ಸುರಿವರಲ್ಲ//

ಶ್ರೀಮತಿ ಶಾರದಾ ವೀರಣ್ಣ ಬೆಟಗೇರಿ. ಗಂಗಾವತಿ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group