spot_img
spot_img

ಕವನ

Must Read

ಜಗವೆ ಕೂಡಲ ಸಂಗಮ
ಬಸವ ಬಳ್ಳಿ ಲಿಂಗ ಜಂಗಮ
ಜಗವೆ ಕೂಡಲ ಸಂಗಮ.
ಅರಿವೇ ಗುರುವು, ನಡೆಯು ಲಿಂಗ
ನುಡಿಯೇ ಅಮರ ಜಂಗಮ

- Advertisement -

ಅಂಗವಳಿದು ಲಿಂಗವಿಡಿದು
ಶರಣ ಬಾಳು ಸ್ಪಂದನ
ಲಿಂಗ ಮಜ್ಜನ ಪಾದದುದಕ
ಅರಿವು  ಸ್ಪೂರ್ತಿಯ ಸಿಂಚನ

ಸತ್ಯವೆಂಬುದೆ ನಿತ್ಯ ಪಠಣ,
ನೀತಿ ಪಾಠದ ಮಂಥನ
ನೆಲದ ಮೇಲೆ ಬೆಳಕು ಚೆಲ್ಲಿದೆ
ಜಗದಿ ನಿತ್ಯ ವಚನ ಚಿಂತನ

ಒಂದು ಮಾಡಿದ ಹಿರಿದು ಕಿರಿದು
ಸಮತೆವೆಂಬ ದೀಪವು
ಉಚ್ಚ  ನೀಚ ಬೇಧ  ಹರಿಯಿತು
ಅದುವೇ ಧರ್ಮ ಧೂಪವು

- Advertisement -

ಗುಡಿಗಳೆಲ್ಲ ನಲುಗಿ ಹೋದವು
ವೇದ ಶಾಸ್ತ್ರ ಪುರಾಣವು
ದಲಿತ -ಮಹಿಳೆ -ಅಸಹಾಯಕರು
ಬಸವ ಧರ್ಮದ ಒಡೆಯರು

ಜಿಡ್ಡುಗಟ್ಟಿದ ಕಟ್ಟು ಕಳಚಿತು
ಮುಕ್ತ ವಿಶ್ವದ ಪ್ರೇಮವು
ಬಸವನುಸಿರೆ ದಿವ್ಯ  ಮಂತ್ರವು
ಲಿಂಗವಂತ ಸ್ವತಂತ್ರವು

ಡಾ. ಶಶಿಕಾಂತ. ರು. ಪಟ್ಟಣ -ಪೂನಾ
- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ತಲೆಬಾಗು ಗುರುಗಳಿಗೆ ಗಣ್ಯರಿಗೆ ಮಾನ್ಯರಿಗೆ ಶಿರಬಾಗು ಹಿರಿಯರಿಗೆ ಹೆತ್ತವರಿಗೆ ಶರಣಾಗು ಸಂಪೂರ್ಣ ಮದವಳಿದು ದೈವಕ್ಕೆ ಬಾಗಿದವ ಬಾಳುವನು - ಎಮ್ಮೆತಮ್ಮ ಶಬ್ಧಾರ್ಥ ಗಣ್ಯರು = ಗಣನೀಯವಾದವರು ಮಾನ್ಯರು = ಮನ್ನಣೆಗೆ ಪಾತ್ರರಾದವರು ತಾತ್ಪರ್ಯ ಗುರುಗಳಲ್ಲಿ‌ ಗಣ್ಯರಲ್ಲಿ‌ ಮಾನ್ಯರಲ್ಲಿ‌‌...
- Advertisement -

More Articles Like This

- Advertisement -
close
error: Content is protected !!
Join WhatsApp Group