ಕವನ: ಮತ್ತೆ ಹುಟ್ಟಿ ಬನ್ನಿ

Must Read

ಮತ್ತೆ ಹುಟ್ಟಿ ಬನ್ನಿ

ದಿಟ್ಟೆದೆ ತೋರುತ ಆದರ್ಶವಾಗಿ ಜಗದೆಲ್ಲೆಡೆ

ವಿವೇಕ ಮೆರೆದೆ

ತಟ್ಟುತ ತರುಣರ ಹೃದಯವ ಜಾಗೃತಗೊಳಿಸಿ 

ಮೌಲ್ಯವ ಎರೆದೆ

ಅಟ್ಟುತ ದೂರಕೆ ಆಲಸ್ಯವ ಮೈಕೊಡವಿ

ಬನ್ನಿರೆಂದಿರಲ್ಲವೇ

ಮೆಟ್ಟುತ ಚಿಕ್ಯಾಗೋ ನೆಲವ ಭಾಷಣದೊಳು

ಎಲ್ಲರ ಕಣ್ ತೆರೆದೆ

ವೀರ ಸನ್ಯಾಸಿಯೇ ದೇಶವಿದೇಶಗಳ ತುಂಬೆಲ್ಲ

ಪ್ರಖ್ಯಾತಿ ಪಡೆದಿರಿ

ಸಾರುವ ಘೋಷವಾಕ್ಯ ಮನ ಪರಿವರ್ತಿಸಿ

ಸಂಸ್ಕೃತಿ ಪೊರೆದೆ

ವ್ಯಕ್ತಿತ್ವ ವಿಕಸನಕೆ ದಿವ್ಯೌಷಧಿ ನಿಮ್ಮ ನುಡಿ

ಓರೆಕೋರೆಯ ತಿದ್ದುವಲ್ಲಿ

ಶಕ್ತಿ ಪ್ರವೇಶ ಕಾಯದಿ ಸ್ವಾಮಿ ವಿವೇಕಾನಂದ

ಎಂದು ಹೆಸರು ಕರೆದೆ

ಕರಕಮಲ ಜೋಡಿಸಿ ಶಿರಬಾಗುವೆನಿಂದು 

ತಮ್ಮ ಜಯಂತಿಯ ಆಚರಿಸಿ

ಮರಳಿ ಮತ್ತೆ ಹುಟ್ಟಿ ಬನ್ನಿರೆಂಬ  ಹಂಬಲವ ಗಝಲ್ ಮೂಲಕ ಬರೆದೆ.


ಶ್ರೀಮತಿ ಕಮಲಾಕ್ಷಿ ಕೌಜಲಗಿ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group