ಕರ್ಕಶ ಶಬ್ದ ; ನೂರಾರು ಸೈಲೆನ್ಸರ್ಗಳ ಧ್ವಂಸ ಮಾಡಿದ ಪೊಲೀಸರು

Must Read

ಬೀದರ – ನಗರದಲ್ಲಿ ಕರ್ಕಶ ಶಬ್ದ ಮಾಡುತ್ತ ಓಡಾಡುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ಬಿಸಿ ಮುಟ್ಟಿಸಿರುವ ಪೊಲೀಸರು ನೂರಾರು ಬೈಕ್ ಗಳ ಸೈಲೆನ್ಸರ್ ಗಳನ್ನು ಧ್ವಂಸ ಮಾಡಿದ್ದಾರೆ.

ನಗರದ ಅಂಬೇಡ್ಕರ್ ವೃತ್ತದಲ್ಲಿ ೧೪೭ ಸೈಲೆನ್ಸರ್ ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಧ್ವಂಸ ಮಾಡಿದ್ದಲ್ಲದೆ ರೂ. ೧.೩೭ ಲಕ್ಷ ದಂಡ ಕೂಡ ವಸೂಲಿ ಮಾಡಿದರು.

ಎಸ್ ಪಿ ಪ್ರದೀಪ ಗುಂಟಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಸಾರಿಗೆ ನಿಯಮಗಳನ್ನು ಪಾಲಿಸದ ವಾಹನ ಸವಾರರಿಗೆ ಚುರುಕು ಮುಟ್ಟಿಸಿದರು.

ಕಾರ್ಯಾಚರಣೆಯ ನಂತರ ಎಸ್ ಪಿ ಯವರು ವಾಹನ ಚಾಲಕರು ಸಾರಿಗೆ ನಿಯಮಗಳನ್ನು ಪಾಲಿಸಬೇಕು ಎಂದು ಕರೆ ನೀಡಿದರು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಓಂ ಸಂತಾಗೆ ಸಕಲ ಕಲಾ ವಲ್ಲಭ ಪ್ರಶಸ್ತಿ ಪ್ರದಾನ

ಮೂಡಲಗಿ : ಇತ್ತೀಚೆಗೆ ರಬಕವಿ-ಬನಹಟ್ಟಿ ತಾಲೂಕಿನ ಸೈದಾಪುರ ಗ್ರಾಮದ ಮಾಧವಾನಂದ ಆಶ್ರಮದಲ್ಲಿ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಾಗಲಕೋಟ, ಮಹಾಕವಿ ರನ್ನ ಫೌಂಡೇಶನ್...

More Articles Like This

error: Content is protected !!
Join WhatsApp Group