ಬೀದರ– ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಮುಖಂಡರ ನಡುವೆಯೇ ಗಲಾಟೆಯಾದ ಬಗ್ಗೆ ವರದಿಯಾಗಿದ್ದು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಬಿಸಿ ವಾತಾವರಣ ಉಂಟಾಗಿದೆ.
ಈ ಇಬ್ಬರೂ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದು ಸದ್ಯದಲ್ಲಿಯೇ ಚುನಾವಣೆ ಇರುವುದರಿಂದ ಕ್ಷೇತ್ರದಲ್ಲಿ ಟಿಕೆಟ್ ಕುರಿತಂತೆ ಅಸಮಾಧಾನ ಇದ್ದದ್ದು ಈಗ ಬಹಿರಂಗವಾಗಿದೆಯೆನ್ನಲಾಗಿದೆ.
ಕಾಂಗ್ರೆಸ್ ಮುಖಂಡ ಆನಂದ ದೇವಪ್ಪ ಅವರ ಮೇಲೆ ಮಾಜಿ ಮುಖ್ಯಮಂತ್ರಿ ಧರಮಸಿಂಗ್ ಪುತ್ರ ವಿಜಯ ಸಿಂಗ್ ಬೆಂಬಲಿಗರಿಂದ ಹಲ್ಲೆ ನಡೆದ ಬಗ್ಗೆ ವರದಿಯಾಗಿದೆ. ಬಳಿಕ ವಿಜಯ್ ಸಿಂಗ್ ಬೆಂಬಲಿಗರು ಕಾಂಗ್ರೆಸ್ ಮುಖಂಡ ಆನಂದ್ ದೇವಪ್ಪ ಅವರ ಮೇಲೆ ಹಲ್ಲೆ ಮಾಡಿದರೆಂದು ಆರೋಪಿಸಲಾಗಿದೆ.
ನಾಳೆ ಬಸವಕಲ್ಯಾಣಕ್ಕೆ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮನ.ಈ ಹಿನ್ನಲೆಯಲ್ಲಿ ಬಸವಕಲ್ಯಾಣ ಬಿಕೆಡಿಬಿ ಕಚೆರಿಯ ಪೂರ್ವಭಾವಿ ಸಭೆ ನಡೆಯುತ್ತಿರುವಾಗ ಈ ಘಟನೆ ನಡೆದಿದೆ. ಗಾಯಗೊಂಡ ಕಾಂಗ್ರೆಸ್ ಮುಖಂಡ ಆನಂದ್ ದೇವಪ್ಪ ಅವರಿಗೆ ಬಸವಕಲ್ಯಾಣ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವರದಿ: ನಂದಕುಮಾರ ಕರಂಜೆ, ಬೀದರ