ಪ್ರಾಧ್ಯಾಪಕ -ಲೇಖಕ -ಸಂಘಟಕ ಡಾ. ಆರ್. ವಾದಿರಾಜು ಅವರಿಗೆ ‘ಭಕ್ತಿ ಸಾಹಿತ್ಯ ಪ್ರಶಸ್ತಿ’

Must Read

ಯೋಗ ಯುನಿವರ್ಸಿಟಿ ಆಫ್ ದಿ ಅಮೆರಿಕಾಸ್ ಮತ್ತು ಬೆಂಗಳೂರಿನ ಅರಳುಮಲ್ಲಿಗೆ ಪ್ರತಿಷ್ಠಾನದ ಸಹಯೋಗದಲ್ಲಿ ಪ್ರಾಧ್ಯಾಪಕ- ಲೇಖಕ- ಸಂಘಟಕ ಡಾ. ಆರ್. ವಾದಿರಾಜರವರ ಅವರ ಸಾಹಿತ್ಯಿಕ ಸೇವೆಯನ್ನು ಗುರುತಿಸಿ ಮತ್ತು ಅವರ 50ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಭಕ್ತಿ ಸಾಹಿತ್ಯ ಪ್ರಶಸ್ತಿ 2023 ಪ್ರದಾನವನ್ನು ನಗರದ ಜೆಸಿ ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಅಕ್ಟೋಬರ್ ಒಂದು ಬೆಳಗ್ಗೆ 9:30 ಕೆ ಆಯೋಜಿಸಲಾಗಿದೆ.

ಶ್ರೀಯುತರು ರಚಿಸಿರುವ ಹಯವದನ ಕೃತಿಯನ್ನು ಖ್ಯಾತ ಹರಿದಾಸ ವಿದ್ವಾಂಸ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ಲೋಕಾರ್ಪಣೆಗೊಳಿಸುವರು. ಯೋಗ ಯುನಿವರ್ಸಿಟಿ ಆಫ್ ಅಮೆರಿಕಾಸ್ ಉಪಕುಲಪತಿ ಡಾ. ರಾಜಶೇಖರ ರೆಡ್ಡಿ ಪ್ರಶಸ್ತಿ ಪ್ರಧಾನ ಮಾಡುವರು. ಖ್ಯಾತ ಕಾದಂಬರಿಕಾರ ಡಾ. ಸುರೇಶ ಪಾಟೀಲ, ಹರಿದಾಸ ಸಂಶೋಧಕ ಸೇಡಂನ ಡಾ. ವಾಸುದೇವ ಅಗ್ನಿಹೋತ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಯೋಗ ಯುನಿವರ್ಸಿಟಿ ಆಫ್ ಅಮೆರಿಕಾಸ್ ನ ಉಪಾಧ್ಯಕ್ಷ ಡಾ ಯೋಗಿ ದೇವರಾಜು ಅಧ್ಯಕ್ಷತೆ ವಹಿಸುವ ಸಮಾರಂಭದಲ್ಲಿ ವಿಶೇಷ ನಾಟಕ ಪ್ರದರ್ಶನ ನೊಣವಿನಕೆರೆ ರಾಮಕೃಷ್ಣಯ್ಯ ನಿರ್ದೇಶನದ ಡಾ.ರತ್ನ ನಾಗರಾಜ್ ರಚನೆಯ ಸಿರಿ ಸಾಂಸ್ಕೃತಿಕ ಪ್ರತಿಷ್ಠಾನದ ಕಲಾವಿದರಿಂದ ಗಾಂಧಿ -ಮೌನ -ಯಾನ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

ಡಾ. ವಾದಿರಾಜು ಕಿರುಪರಿಚಯ 

ವಿಜಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿರುವ ಡಾ. ಆರ್. ವಾದಿರಾಜು ಅವರು ಅಧ್ಯಯನ ಅಧ್ಯಾಪನದಿಂದ ಜನಪ್ರಿಯರಾದವರು.

ಸಹೃದಯತೆ ಅವರ ಒಂದು ಗುಣ ವಿಶೇಷ. ದಾಸ ಸಾಹಿತ್ಯ ಅವರ ಆಸಕ್ತಿಯ ಕ್ಷೇತ್ರ .ವಾದಿರಾಜರ ಕುರಿತು ಕುಪ್ಪಂನ ದ್ರಾವಿಡ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಗಳಿಸಿದ್ದಾರೆ. ಹಲವಾರು ಕೃತಿ ರಚನೆ ನಡೆಸಿರುವ ಶ್ರೀಯುತರು ಟಿಟಿಡಿ ಸಪ್ತಗಿರಿ ಪತ್ರಿಕೆಯ ಸಂಪಾದಕ ಸಲಹಾ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿಷ್ಠಿತ ಪ್ರಶಸ್ತಿಗಳು ಅರಸಿ ಬಂದಿದೆ. ಸಂಘಟಕರಾಗಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಸಾಂಸ್ಕೃತಿಕ ವಲಯದಲ್ಲಿ ತಮ್ಮ ವಿಶಿಷ್ಟ ಛಾಪನ್ನು ಮೂಡಿಸಿರುವ ವಾದಿರಾಜರಿಗೆ ಇದೀಗ 50ರ ಹುಟ್ಟು ಹಬ್ಬದ ಸಂಭ್ರಮ. ಅರಳುಮಲ್ಲಿಗೆ ಪ್ರತಿಷ್ಠಾನದಿಂದ ಭಕ್ತಿ ಸಾಹಿತ್ಯ ಪ್ರಶಸ್ತಿ ಅವರ ಮುಕುಟಕ್ಕೆ ಮತ್ತೊಂದು ಗರಿ.

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...

More Articles Like This

error: Content is protected !!
Join WhatsApp Group