ಮೂಡಲಗಿ ತಾಲೂಕಿನ ಮೂಡಲಗಿ ನಗರ ವಲಯದ ಪಟಗುಂದಿ ಕಾರ್ಯಕೇತ್ರದ ಸಾಯಿಬಾಬಾ ಮಹಿಳಾ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಗ್ರಾಮ ಪಂಚಾಯತ ಅಧ್ಯಕ್ಷರಾದ ಜಾಹೇದಭಿ ಫೀರಜಾದೆ ಇವರು, ಧರ್ಮಸ್ಥಳ ಯೋಜನೆ ಪ್ರತಿಯೊಂದು ಕಾರ್ಯಕ್ರಮಗಳನ್ನು ಗ್ರಾಮೀಣ ಮಟ್ಟಕ್ಕೆ ತಲುಪಿಸುವ ಯೋಜನೆಯಾಗಿದ್ದು ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲು ಸಹಕಾರಿಯಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ನಂತರದಲ್ಲಿ PRK ಬಗ್ಗೆ CSC ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರಿಗೆ ಆಟೋಟ ಆಡಿಸಿ ತಮ್ಮ ಪ್ರತಿಭೆ ಗುರುತಿಸಲು ವೇದಿಕೆ ಕಲ್ಪಿಸಿ ಕೊಡಲಾಯಿತು. ಜ್ಞಾನವಿಕಾಸ ಸಮನ್ವಯಧಿಕಾರಿಗಳು ಶ್ರದ್ಧಾ ಮಂಜುನಾಥ್ ಕಮ್ಮಾರ್,village level enterpreneur ಸೇವಾಪ್ರತಿನಿಧಿಗಳು ಮಾಲಿಕಜನ್ ಕೌಸರ್ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.