ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ

Must Read

ಮೂಡಲಗಿ: ಸಚಿವ ಕೆ ಎಸ್ ಈಶ್ವರಪ್ಪನವರು ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ಜಜ ಹಾರಿಸುವ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ, ಸಚಿವ ಸ್ಥಾನದಿಂದ ಈಶ್ವರಪ್ಪನವರನ್ನು ವಜಾ ಮಾಡಿ, ದೇಶದ್ರೋಹ ಕಾಯ್ದೆಯಡಿಯಲ್ಲಿ ದೂರು ದಾಖಲಿಸುವಂತೆ ಅಗ್ರಹಿಸಿ ಕಾಂಗ್ರೆಸ್ ಪಕ್ಷದ ಅರಭಾವಿ ಹಾಗೂ ಕೌಜಲಗಿ ಬ್ಲಾಕ್ ಕಮಿಟಿ ವತಿಯಿಂದ ಮೂಡಲಗಿ ಪಟ್ಟಣದಲ್ಲಿ ಸೋಮವಾರ ಮುಂಜಾನೆ 10 ಗಂಟೆಗೆ ಮೂಡಲಗಿ ಕಲ್ಮೇಶ್ವರ ವೃತ್ತದಿಂದ ತಹಶೀಲ್ದಾರರ ಕಛೇರಿ ವರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮೂಡಲಗಿ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಕಲ್ಲಪ್ಪಗೌಡ ಲಕ್ಕಾರ ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಪಕ್ಷದ ಸರ್ವ ಮುಖಂಡರು ಹಾಗೂ, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸ ಬೇಕೆಂದು ಅರಭಾವಿ ಮತ್ತು ಕೌಜಲಗಿ ಬ್ಲಾಕ್ ಅಧ್ಯಕ್ಷರಾದ ಗುರುರಾಜ ಪೂಜೇರಿ, ಲಗಮನ್ನ ಕಳಸನ್ನವರ ತಿಳಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group