- Advertisement -
ಬೀದರ – ಎಐಎಮ್ಐಎಮ್ ನಾಯಕ ಅಸಾದುದ್ದೀನ್ ಓವೈಸಿ ಮೇಲೆ ಗುಂಡಿನ ದಾಳಿ ನಡೆದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್ ನಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
ಉತ್ತರ ಪ್ರದೇಶ ಚುನಾವಣೆ ಪ್ರಚಾರ ಮುಗಿಸಿ ಕೊಂಡು ದೆಹಲಿ ಕಡೆ ಪ್ರಯಾಣ ಬೆಳೆಸಿದ್ದ AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
- Advertisement -
ಬೀದರ್ ಚೌಬಾರ ದಿಂದ ಜಿಲ್ಲಾ ಅಧಿಕಾರಿ ಕಾರ್ಯಾಲಯ ವರೆಗೆ ಪಾದಯಾತ್ರೆ ಯಾರ್ಲಿ ಮಾಡಿದ ಕಾರ್ಯಕರ್ತರು ಜಿಲ್ಲಾ ಅಧಿಕಾರಿ ಮನವಿ ಸಲ್ಲಿಸಿ ತಮ್ಮ ಪ್ರತಿಭಟನೆ ವ್ಯಕ್ತಮಾಡಿದರು.
ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ