ಸಿಂದಗಿ: ಆನ್ಲೈನ್ ಅರ್ಜಿ ಹಾಕಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಿಗೆ ಪ್ರವೇಶ ಮಾಡಿಕೊಳ್ಳುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಘಟಕ ವತಿಯಿಂದ ತಾಲೂಕಾ ಸಮಾಜ ಕಲ್ಯಾಣಾಧಿಕಾರಿ ಎಸ್.ಎನ್.ಭೂಸಗೊಂಡ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಹರ್ಷವರ್ಧನ ಪೂಜಾರಿ ಮಾತನಾಡಿ, ಸತತ 2 ವರ್ಷಗಳಿಂದ ಇಡೀ ದೇಶಕ್ಕೆ ಕರೋನಾ ಆವರಿಸಿ ಶಾಲಾ-ಕಾಲೇಜುಗಳು ನಡೆಯದೇ ಶಿಕ್ಷಣ ಗುಣಮಟ್ಟ ಕುಸಿದಿದೆ ಅಲ್ಲದೆ ಜನರ ಕೈಗಳಿಗೆ ಕೆಲಸವಿಲ್ಲದೆ ಜೀವನ ನಡೆಸುವುದು ದುಸ್ತರವಾಗಿದ್ದು ಇಂತಹ ಸಂದರ್ಭದಲ್ಲಿ ಶಿಕ್ಷಣ ನೀಡಲು ಅಗದೇ ಕೆಲ ಮಕ್ಕಳು ಶಿಕ್ಷಣದಿಂದ ದೂರ ಸರಿದಿದ್ದಾರೆ ಅಲ್ಪ-ಸ್ವಲ್ಪ ಸ್ಥಿತಿವಂತರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ನಿರ್ಣಯಿಸಿ ಶಾಲಾ-ಕಾಲೇಜುಗಳಿಗೆ ಪ್ರವೇಶ ಪಡೆದಿದ್ದಾರೆ. ಆದರೆ ಊಟಕ್ಕಾಗಿ ಪರಿತಪಿಸುವ ಸಂದರ್ಭ ಬಂದೊದಗಿದ್ದು ಕಾರಣ ವಸತಿ ನಿಲಯಕ್ಕೆ ಆನ್ಲೈನ್ ಅರ್ಜಿ ಹಾಕಿರುವ ಎಲ್ಲಾ ವಿದ್ಯಾರ್ಥಿಗಳನ್ನು ವಸತಿ ನಿಲಯಕ್ಕೆ ಪ್ರವೇಶ ಮಾಡಿ ಕೊಂಡು ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಸುಮೀತ ರಂಜುಣಗಿ, ಗಂಗಾದರ ನಾಗಾವಿ, ಬಸು ನಾವಿ ಸೇರಿದಂತೆ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಇದ್ದರು.