spot_img
spot_img

ಕೊನೆಗೂ ಮನೆ ಬಿಟ್ಟ ರಾಹುಲ್ ಗಾಂಧಿ

Must Read

- Advertisement -

ಹೊಸದಿಲ್ಲಿ – ಮೋದಿ ಉಪನಾಮದ ಬಗ್ಗೆ ಟೀಕೆ ಮಾಡಿ ಸೂರತ್ ಕೋರ್ಟಿನಿಂದ ಎರಡು ವರ್ಷಗಳ ಶಿಕ್ಷೆ ಹಾಗೂ ಸರ್ಕಾರಿ ಬಂಗಲೆ ಖಾಲಿ ಮಾಡುವ ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ತಮ್ಮ ಸರಂಜಾಮುಗಳೊಂದಿಗೆ ಮನೆ ಖಾಲಿ ಮಾಡಿದರು.

ಈ ಸಂದರ್ಭದಲ್ಲಿ ಪತ್ರಿಕೆಗಳೊಂದಿಗೆಮಾತನಾಡಿದ ಅವರು, ನಾನು ಸರ್ಕಾರದ ವಿರುದ್ಧ ಸತ್ಯ ಹೇಳಿದ್ದಕ್ಕೆ ನನಗೆ ಈ ಶಿಕ್ಷೆ ದೊರಕಿದೆ ಆದರೂ ನನ್ನ ಹೋರಾಟ ನಿಲ್ಲುವುದಿಲ್ಲ ಎಂದರು.

ಈ ಬಗ್ಗೆ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ವಾದ್ರಾ ಮಾತನಾಡಿ, ನನ್ನ ಸಹೋದರ ಹೇಳುವುದು ಸತ್ಯವಾಗಿದೆ ಅವರ ಹೋರಾಟದಲ್ಲಿ ನಾನೂ ಭಾಗಿಯಾಗುತ್ತೇನೆ ಎಂದರು.

- Advertisement -

ಮೋದಿ ಎಂಬ ಉಪನಾಮ ಹೊಂದಿವರೆಲ್ಲರೂ ಕಳ್ಳರೇ ಯಾಕಿದ್ದಾರೆ ಎಂಬ ಪ್ರಶ್ನೆಯೊಂದಿಗೆ ಒಂದು ಸಮುದಾಯವನ್ನು ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಎಂದು ಅವರ ವಿರುದ್ಧ ಮಾನಹಾನಿ ಕೇಸು ದಾಖಲಾಗಿತ್ತು. ಈ ಕೇಸಿನಲ್ಲಿ ಸೂರತ್ ಕೋರ್ಟು ರಾಹುಲ್‌ ಗಾಂಧಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ, ಅವರ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸಿತ್ತು ಈ ಹಿನ್ನೆಲೆಯಲ್ಲಿ ಅವರು ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕಿತ್ತು. ಇದೇ ದಿ. ೨೨ ರ ತನಕ ವೇಳೆ ಪಡೆದುಕೊಂಡಿದ್ದ ರಾಹುಲ್ ಗಾಂಧಿ ಇಂದು ಸರ್ಕಾರಿ ಮನೆಯನ್ನು ಖಾಲಿ ಮಾಡಿದರು.

- Advertisement -
- Advertisement -

Latest News

ಸೌರ ವಿದ್ಯುತ್ ಉತ್ಪಾದನೆ ಮಾಹಿತಿ ಕಾರ್ಯಾಗಾರ

ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಶಕ್ತಿನಗರದ ಅಭಿಯಂತರುಗಳಿಗೆ ಹಾಗೂ, ರಾಯಚೂರು ಜಿಲ್ಲೆಯ ವಿವಿಧ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ "ಸುಸ್ಥಿರ ಹಸಿರು ವಿದ್ಯುಚ್ಛಕ್ತಿ ಉತ್ಪಾದನೆಗೆ ಸೌರಶಕ್ತಿ ಬಳಕೆ"...
- Advertisement -

More Articles Like This

- Advertisement -
close
error: Content is protected !!
Join WhatsApp Group