ಮುನವಳ್ಳಿಃ ಶ್ರೀ ನಿತ್ಯಾನಂದ ಸತ್ಸಂಗ ಆಶ್ರಮ ಶಿಂದೋಗಿ ಮುನವಳ್ಳಿಯಲ್ಲಿ ಶನಿವಾರ ಮುಂಜಾನೆ ೧೧ ಗಂಟೆಗೆ ‘ಕೈವಲ್ಯ ಪದ್ಧತಿ’ ಹಾಗೂ ‘ಸ್ಪೂರ್ತಿ’ ಗ್ರಂಥಗಳ ಬಿಡುಗಡೆ ಸಮಾರಂಭ ಜರುಗಲಿದೆ.
ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೋತ್ರೀಯ ಬ್ರಹ್ಮನಿಷ್ಠ ಸದ್ಗುರು ಶ್ರೀ ಸಿದ್ಧಶಿವಯೋಗಿಗಳು ಸಿದ್ದಾಶ್ರಮ ದೇವರ ಹುಬ್ಬಳ್ಳಿ. ಬೇವಿನಕೊಪ್ಪದ ಶ್ರೀ ನಿತ್ಯಾನಂದ ಧ್ಯಾನ ಮಂದಿರದ ಶ್ರೋತ್ರೀಯ ಬ್ರಹ್ಮನಿಷ್ಠ ಸದ್ಗುರು ಶ್ರೀ ವಿಜಯಾನಂದ ಮಹಾಸ್ವಾಮಿಗಳು. ಸಿಂದೋಗಿ ಮುನವಳ್ಳಿಯ ಶ್ರೀ ನಿತ್ಯಾನಂದ ಸತ್ಸಂಗ ಆಶ್ರಮದ ಶ್ರೋತ್ರೀಯ ಬ್ರಹ್ಮನಿಷ್ಠ ಸದ್ಗುರು ಶ್ರೀ ಮುಕ್ತಾನಂದ ಮಹಾಸ್ವಾಮಿಗಳು ವಹಿಸುವರು ಎಂದು ಶ್ರೀ ಮಠದ ಪ್ರಕಟಣೆಯಲ್ಲಿ ತಿಳಿಸಿದೆ.