ಮುನ್ಯಾಳ ಸದಾಶಿವಮಠದಲ್ಲಿ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ
ಮೂಡಲಗಿ: ತಾಲ್ಲೂಕಿನ ಮುನ್ಯಾಳ-ರಂಗಾಪೂರದ ಶ್ರೀ ಸದಾಶಿವ ಯೋಗೀಶ್ವರಮಠದಲ್ಲಿ ಹಣಮಂತದೇವರ ಮಂದಿರ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಮತ್ತು ಅಶ್ವಾರೂಢ ಶ್ರೀ ಗುರು ಬಸವರಾಜ ಅಜ್ಜನವರ ಸರ್ಕಲ್ ಉದ್ಘಾನೆಯು ದಿ. 7ರಂದು ಸಂಜೆ 4ಕ್ಕೆ ಜರುಗಲಿದೆ.
ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸುವರು. ಸದಾಶಿವಯೋಗಿಶ್ವರಮಠದ ಪೀಠಾಧಿಪತಿ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.
ಗೋಕಾಕದ ಶೂನ್ಯಸಂಪಾದನ ಮಠದ ಮುರಘರಾಜೇಂದ್ರ ಸ್ವಾಮೀಜಿ, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯರು, ಸುಣಧೋಳಿಯ ಶಿವಾನಂದ ಸ್ವಾಮೀಜಿ, ಚಿಕ್ಕೊಪ್ಪದ ವೀರಭದ್ರ ಸ್ವಾಮೀಜಿ, ಬಬಲಾದಿ ಹಿರೇಮಠದ ಓಂಕಾರೇಶ್ವರ ಸ್ವಾಮೀಜಿ, ಅರಕೇರಿಯ ಅವದೂತ ಸಿದ್ದಮಹಾರಾಜ, ಜೋಡಕುರಳಿಯ ಚಿದಾನಂದ ಭಾರತಿ, ಇಟನಾಳದ ಸಿದ್ಧೇಶ್ವರ ಶರಣರು, ಮುನ್ಯಾಳದ ಲಕ್ಷ್ಮಣದೇವರು ಭಾಗವಹಿಸುವರು.
ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮ: ನ. 6ರಂದು ಬೆಳಿಗ್ಗೆ ಗದ್ದುಗೆಗೆ ಮಹಾ ರುದ್ರಾಭೀಷಕ, ಬಿಲ್ವಾರ್ಚನೆ ಇರುವುದು.
ಸಂಜೆ ನಡೆಯುವ ಧರ್ಮಸಭೆಯ ಮುಂಚೆ ಜಗದ್ಗುರುಗಳು ಮತ್ತು ಆಗಮಿಸುವ ಎಲ್ಲ ಪೂಜ್ಯರನ್ನು ಕುಂಭ, ಆರತಿ ಮತ್ತು ಸಕಲ ವಾದ್ಯ ವೈಭವದೊಂದಿಗೆ ಶ್ರೀಮಠಕ್ಕೆ ಬರಮಾಡಿಕೊಳ್ಳುವರು. ರಾತ್ರಿ 9 ಕ್ಕೆ ಸಾಮಾಜಿಕ ನಾಟಕ ಪ್ರದರ್ಶನ ಇರುವುದು.