ಮಹಾಶಿವರಾತ್ರಿ ನಿಮಿತ್ತ ಶಿವಸ್ಮರಣೆ ಹಾಗೂ ಬಿಲ್ವಾರ್ಚನೆ

Must Read

ಸಿಂದಗಿ; ಫೇ ೨೬ ರಂದು ಮಹಾಶಿವರಾತ್ರಿ ನಿಮಿತ್ತ ಶಿವ ಸ್ಮರಣೆ ಹಾಗೂ ದಶಲಕ್ಷ ಬಿಲ್ವಾರ್ಚನೆ ಹಮ್ಮಿಕೊಳ್ಳಲಾಗಿದೆ ಕಾರಣ ಸುತ್ತಮುತ್ತಲಿನ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಪುನೀತರಾಗುವಂತೆ ಆದಿಶೇಷ ಸಂಸ್ಥಾನ ಹಿರೇಮಠದ ಶ್ರೀ ರಾಜಯೋಗಿ ವೀರರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ರೂಪರೇಷಗಳ ಕುರಿತು ನಡೆಸಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂದು ಸಾಯಂಕಾಲ ೬ ಗಂಟೆಯಿಂದ ಬೆಳಗಿನ ೬ ಗಂಟೆಯವರೆಗೆ ಶಿವ ಸ್ಮರಣೆ ಹಾಗೂ ದಶಲಕ್ಷ ಬಿಲ್ವಾರ್ಚನೆ ಮತ್ತು ಅಹೋರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಕಲಾವಿದರಿಂದ ಸಂಗೀತ ಸುಧೆ ಉಣಬಡಿಸಲಿದ್ದಾರೆ. ಅಲ್ಲದೆ ಆ ದಿನದಂದು ಉಪವಾಸ ಇದ್ದವರಿಗೆ ಸಿಹಿ ತಿನಿಸುಗಳು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group