spot_img
spot_img

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Must Read

- Advertisement -

ಬೈಲಹೊಂಗಲ: ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ 74 ನೆಯ ಗಣರಾಜ್ಯೋತ್ಸವ ಆಚರಿಸಲಾಯಿತು.

ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ,  ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅರಿತು ಉತ್ತಮ ನಾಗರಿಕರಾಗಬೇಕು ಎಂದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ ಇವರ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪಥಸಂಚಲನ ಎಲ್ಲ ಗಮನ ಸೆಳೆಯಿತು. ಸಂವಿಧಾನ, ಯೋಧರ ತ್ಯಾಗ,  ದೇಶಪ್ರೇಮದ ಕುರಿತು ಪೂಜಾ ಸೊಗಲದ, ಸುನೀತಾ ಚಿಲಮೂರ, ಸುಶ್ಮಿತಾ ಸೊಗಲದ ಮಾತನಾಡಿದರು. ಸಾಕ್ಷಿ ಹಿರೇಮಠ, ಸಾಕ್ಷಿ ನಾಗಣ್ಣವರ, ತನುಜಾ ಬಡಿಗೇರ ಹಾಗೂ 10 ನೆಯ ತರಗತಿಯ ವಿದ್ಯಾರ್ಥಿನಿಯರು ದೇಶಭಕ್ತಿ ಗೀತೆಗಳನ್ನು ಹಾಡಿದರು.

- Advertisement -

ಐಶ್ವರ್ಯ ಕುಲಕರ್ಣಿ ಸ್ವಾಗತಿಸಿದರು. ಚೈತ್ರಾ ಸೊಗಲದ ನಿರೂಪಿಸಿದರು. ಸಾಕ್ಷಿ ಹಿರೇಮಠ ವಂದಿಸಿದರು.

ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ವಿನಾಯಕ ಬಡಿಗೇರ, ಸದಸ್ಯರಾದ ನಿರ್ಮಲಾ ಮೆಕ್ಕೇದ, ಶಿಕ್ಷಕರಾದ ಜಗದೀಶ ನರಿ, ಶ್ರೀಪಾಲ ಚೌಗಲಾ, ಸುನೀಲ ಭಜಂತ್ರಿ, ರೇಖಾ ಸೊರಟೂರ, ಶಿವಾನಂದ ಬಳಿಗಾರ, ವೀರೇಂದ್ರ ಪಾಟೀಲ, ಅಡುಗೆ ಸಿಬ್ಬಂದಿಗಳಾದ ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group