ಬೈಲಹೊಂಗಲ -ಕೊರೋನಾ ಸಮಯದಲ್ಲಿ ರಾಜ್ಯದ ಔಷಧ ಅಂಗಡಿಗಳಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಕೊರೋನಾ ವಾರಿಯರ್ಸ್ ಗಳೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಇಲ್ಲಿಯ ಔಷಧ ಅಂಗಡಿಗಳಲ್ಲಿ ಕೆಲಸ ಮಾಡುವ ನೌಕರರು ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದರು.
ಕೊರೋನಾ ಸಂದರ್ಭದಲ್ಲಿ ಔಷಧ ಅಂಗಡಿಗಳಲ್ಲಿ ಸೇವೆ ಸಲ್ಲಿಸುವ ನೌಕರರಿಗೆ ಆರೋಗ್ಯದಲ್ಲಿ ಕೊರೋನಾ ಲಕ್ಷಣ ಕಂಡು ಬಂದಲ್ಲಿ ಅವರು ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದಲ್ಲಿ ಅವರಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಇಲ್ಲವಾದಲ್ಲಿ ಸರ್ಕಾರವೇ ಅವರ ಚಿಕಿತ್ಸೆಯ ವೆಚ್ಚವನ್ನು ಭರಿಸಬೇಕು.
ಈಗಾಗಲೇ ಕೊರೊನಾ ಲಕ್ಷಣ ಬಂದು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೆ ಅವರ ಆಸ್ಪತ್ರೆ ವೆಚ್ಚವನ್ನು ಸರಕಾರ ಪರಿಹಾರ ರೂಪದಲ್ಲಿ ನೀಡಬೇಕೆಂದು ಆಗ್ರಹಿಸಿ ಅಶೋಕ ಸೌದತ್ತಿ ಅವರ ನೇತೃತ್ವದಲ್ಲಿ ರಾಜ್ಯದ ಮುಖ್ಯಮಂತ್ರಿಯವರಿಗೆ ಹಾಗೂ ಆರೋಗ್ಯ ಸಚಿವರಿಗೆ ತಹಶೀಲ್ದಾರ ಮುಖಾಂತರ ಮೆಡಿಕಲ್ ಅಂಗಡಿಗಳಲ್ಲಿ ಸೇವೆ ಮಾಡುವ ನೌಕರರು ಮನವಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಸಂಗಯ್ಯ ಯರಗಟ್ಟಿ ಮಠ, ನಾಗರಾಜ ಅದರಗಿ, ವೀರೇಶ್ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.