spot_img
spot_img

ಬೈಲಹೊಂಗಲದಲ್ಲಿ ಚೆನ್ನಮ್ಮಾಜೀ ವಿಜಯೋತ್ಸವವನ್ನು ಆಚರಿಸಲು ಬಿಜೆಪಿ ಆಗ್ರಹ

Must Read

spot_img
- Advertisement -

ಬೈಲಹೊಂಗಲ: ಭಾರತೀಯ ಜನತಾ ಪಾರ್ಟಿ ಬೈಲಹೊಂಗಲ ಮಂಡಲದ ಯುವ ಮೋರ್ಚಾ ವತಿಯಿಂದ ವೀರರಾಣಿ ಕಿತ್ತೂರು ಚೆನ್ನಮ್ಮನವರ 200 ನೇ ವಿಜಯೋತ್ಸವವನ್ನು ಬೈಲಹೊಂಗಲ ನಗರದಲ್ಲಿಯೂ ಅದ್ದೂರಿಯಾಗಿ ಆಚರಿಸಲು ಮನವಿ ನೀಡಿ ಆಗ್ರಹಿಸಿದರು.

ಈಗಾಗಲೇ ಕಿತ್ತೂರು ಮತ್ತು ಕಾಕತಿಯಲ್ಲಿ ಅದ್ದೂರಿಯಾಗಿ ಆಚರಿಸುತ್ತಾರೆ ಆದರೆ ಚೆನ್ನಮ್ಮಾಜಿಯವರ ಐಕ್ಯ ಸ್ಥಳವಾದ ಬೈಲಹೊಂಗಲದಲ್ಲಿ ಆಚರಿಸುವದರಿಂದ ವಿಶೇಷ ಮೆರಗು ಬರುತ್ತದೆ ಜೊತೆಗೆ ಐಕ್ಯ ಸ್ಥಳವು ರಾಷ್ಟ್ರೀಯ ಸ್ಮಾರಕವಾಗಬೇಕು ಎನ್ನುವ ಬೇಡಿಕೆಗೆ ಪುಷ್ಠಿ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಮೂಲಕ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ. ಮಂಡಲ ಅಧ್ಯಕ್ಷ ಸುಭಾಸ ತುರಮರಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡರ, ಯುವ ಮೋರ್ಚಾ ಮಂಡಲ ಅಧ್ಯಕ್ಷ ಪ್ರಶಾಂತ ಅಮ್ಮಿನಭಾವಿ, ಮಾಧ್ಯಮ ಸಂಚಾಲಕ ಸಚೀನ ಕಡಿ, ಓಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಹಡಪದ, ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳಾದ, ನಾಗಪ್ಪ ಸಂಗೊಳ್ಳಿ, ಗೌಡಪ್ಪ ಹೊಸಮನಿ, ಸದಾಶಿವ ಪಾಟೀಲ, ಸಂಪ್ರೀತ ತಿಗಡಿ, ಬಸವರಾಜ ಪೂಜೇರ, ಬಸವರಾಜ ದೊಡಮನಿ, ಅನೇಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

 ದಿ. 9 ರಂದು ಕಪ್ಪತಗುಡ್ಡದಲ್ಲಿ 9 ನೇ “ಮಾಸಿಕ ಚಾರಣ ಸಂಭ್ರಮ ಹಾಗೂ ಸಸ್ಯಾನುಭಾವ”

ಗದಗ - ಚಾರಣ ಪ್ರಿಯರು ಮತ್ತು ಸಸ್ಯ ಪ್ರಬೇಧಗಳ ಅಧ್ಯಯನ ನಡೆಸಲು ಕ್ಷೇತ್ರಭೇಟಿ ನೀಡಬಯಸುವ ಸಂಶೋಧನಾಕಾರರಿಗೆ, ಅಧ್ಯಾಪಕರಿಗೆ, ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ, ಆಯುರ್ವೇದ ಹಾಗೂ ಪಾರಂಪರಿಕ ವೈದ್ಯರಿಗೆ,...
- Advertisement -

More Articles Like This

- Advertisement -
close
error: Content is protected !!
Join WhatsApp Group