spot_img
spot_img

ತಿಗಡಿ ಗ್ರಾಮಕ್ಕೆ ಸಮರ್ಪಕ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ

Must Read

spot_img
- Advertisement -

ಮೂಡಲಗಿ – ತಾಲೂಕಿನ ತಿಗಡಿ ಗ್ರಾಮಕ್ಕೆ ಸಮರ್ಪಕ ಬಸ್ ಸಂಚಾರಕ್ಕೆ ಆಗ್ರಹಿಸಿ ಗೋಕಾಕ್ ಬಸ್ ನಿಲ್ದಾಣದ ಕಂಟ್ರೋಲರ್ ಕೆ.ವಿ. ಜಮಾದಾರ್ ಅವರಿಗೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಮಂಗಳವಾರ ಮನವಿ ಸಲ್ಲಿಸಿದರು.

ಗೋಕಾಕ ನಗರದ ಕಾಲೇಜಿಜುಗಳಿಗೆ ತಿಗಡಿ, ಸುಣಧೋಳಿ, ತಳಕಟ್ನಾಳ, ಕಂಡರಟ್ಟಿ ತೋಟದ ಸುಮಾರು 60 ರಿಂದ 70 ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಹೋಗುತ್ತಾರೆ. ತಿಗಡಿ ಕಲ್ಲು ಕಣಿವೆ ಹಾಗೂ ತಿಗಡಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯ್ದು ಕುಳಿತರೆ, ಯಾದವಾಡ ಕಡೆಯಿಂದ ಬರುವ ಎಲ್ಲ ಬಸ್ಸುಗಳು ಪ್ರಯಾಣಿಕರಿಂದ ತುಂಬಿ ಬರುತ್ತವೆ. ಹೀಗಾಗಿ ತಿಗಡಿ ಕಲ್ಲು ಕಣಿವೆ ಹಾಗೂ ತಿಗಡಿ ಬಸ್ ನಿಲ್ದಾಣದಲ್ಲಿ ಯಾವುದೇ ಬಸ್ಸು ನಿಲ್ಲದೆ ಇರುವುದರಿಂದ ವಿದ್ಯಾರ್ಥಿಗಳು, ಪಾಲಕರು ಹಾಗೂ ತಿಗಡಿ ಗ್ರಾಮದ ಹಿರಿಯರು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ತಿಳಿಸಿದಾಗ ತಕ್ಷಣವೇ ಗೋಕಾಕ ಕೆಎಸ್‍ಆರ್‍ಟಿಸಿ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು.

ಗೋಕಾಕ ಬಸ್ ನಿಲ್ದಾಣದ ಕಂಟ್ರೋಲರ್ ಕೆ.ವಿ ಜಮಾದಾರ್ ಹಾಗೂ ಬಸ್ ನಿಲ್ದಾಣದ ಇನ್ ಚಾರ್ಜ್ ಶಂಕರ್ ಮಾದಿಗ ತಿಗಡಿ ಗ್ರಾಮಕ್ಕೆ ಆಗಮಿಸಿ ಸ್ಥಳೀಯರಿಂದ ಮನವಿ ಸ್ವಿಕರಿಸಿ ಪ್ರತಿದಿನ ಬೆಳಿಗ್ಗೆ 8:00 ಗಂಟೆಗೆ ಕಲ್ಲು ಕಣಿವೆ ಹಾಗೂ ಸುತ್ತಲಿನ ಗ್ರಾಮಗಳ ಗ್ರಾಮಸ್ಥರಿಗೆ ಮತ್ತು ವಿದ್ಯಾರ್ಥಿಗಳಿಗಾಗಿ 3-4 ದಿನಗಳಲ್ಲಿ ಬಸ್ ಬಿಡುವುದಾಗಿ ಹೇಳಿದರು.

- Advertisement -

ನಾಲ್ಕು ದಿನಗಳಲ್ಲಿ ಬಸ್ಸು ಬಿಡದಿದ್ದರೆ, ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ರಸ್ತೆ ತಡೆ ಮಾಡಲಾಗುವುದು ಎಂದು ವಿದ್ಯಾರ್ಥಿಗಳು, ಪಾಲಕರು ಮತ್ತು ಹಿರಿಯರಾದ ಹನುಮಂತ ಅಂಬಿ, ಎಲ್ಲಪ್ಪ ಹುಲಿಕಟ್ಟಿ, ರುದ್ರಗೌಡ ಪಾಟೀಲ, ಸಿದ್ದರಾಯ ಬಿರಡಿ, ರಫೀಕ್ ಲಡ್ಕಾನ, ಅಶೋಕ್ ಪೂಜಾರಿ ಇತರರು ಕೆಎಸ್‍ಆರ್‍ಟಿಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

Latest News

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮಾಜಿ ಸೈನಿಕರ ಸಂಘದ ಬೆಂಬಲ

ಮೂಡಲಗಿ - ಮೂಲಭೂತ ಬೇಡಿಕೆಗಳ ಈಡೇರಿಕೆಗಾಗಿ ಇದೇ ದಿ. ೧೦ ರಿಂದ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ಮಾಜಿ ಸೈನಿಕರ...
- Advertisement -

More Articles Like This

- Advertisement -
close
error: Content is protected !!
Join WhatsApp Group