Times of ಕರ್ನಾಟಕ ವರದಿಗೆ ಸ್ಪಂದಿಸಿ ತನಿಖೆಗೆ ಸೂಚಿಸಿದ ಖಂಡ್ರೆ

Must Read

ಬೀದರ – ಅಂಗನವಾಡಿಯೊಂದರಲ್ಲಿ ಕಳಪೆ ಆಹಾರ ಸೇವನೆ ಮಾಡಿ ಅಸ್ವಸ್ಥಗೊಂಡ ೧೨ ಮಕ್ಕಳು ಎಂಬ ತಲೆಬರಹದಡಿ ಪ್ರಕಟಗೊಂಡ ವರದಿಗೆ ಸ್ಪಂದಿಸಿರುವ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರು ತಮ್ಮ ಫೇಸ್ ಬುಕ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದ ತರನಳ್ಳಿ ಗ್ರಾಮದ ಅಂಗನವಾಡಿಯೊಂದರಲ್ಲಿ ಊಟದ ನಂತರ ೧೨ ಮಕ್ಕಳು ಅಸ್ವಸ್ಥಗೊಂಡಿದ್ದು ತಿಳಿದು ದುಃಖವಾಯಿತು.

ಈ ಸಂಬಂಧ ಕೂಡಲೆ ಅಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಿದ್ದು ಮಕ್ಕಳು ಈಗಾಗಲೇ ಚೇತರಿಸಿಕೊಂಡಿದ್ದು ಯಾವುದೇ ಆತಂಕ ಪಡುವ ಅಗತ್ಯವಿಲ್ಲ.

ಈ ನಿರ್ಲಕ್ಷ್ಯತನಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ ಎಂಬುದಾಗಿ ಖಂಡ್ರೆಯವರು ಫೇಸ್ ಬುಕ್ ನಲ್ಲಿ ಬರೆದುಕೊಂಡು Times of ಕರ್ನಾಟಕ ವೆಬ್ ಪತ್ರಿಕೆಯ ಲೋಗೊ ಹಂಚಿಕೊಂಡಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group