ಪತಿಯ ಬ್ಯಾನರ್ ಹರಿದು ಆಕ್ರೋಶ ಹೊರಹಾಕಿದ ಪತ್ನಿ
ಬೀದರ – ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹಾಕಿದ್ದ ಪತಿ ಹಾಗೂ ಬಿಜೆಪಿ ಮುಖಂಡ ಮಲ್ಲೇಶ್ ಅವರ ಬ್ಯಾನರ್ ಹರಿದು ಹಾಕಿ ಪತ್ನಿ ರಂಪಾಟ ಮಾಡಿದ ಘಟನೆ ಬೀದರ್ ನಗರದ ಮೈಲೂರು ಕ್ರಾಸ್ ಬಳಿ ನಡೆದಿದೆ.
ಮಲ್ಲೇಶ್ ಜನ್ಮ ದಿನ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಿಎಂ ಸೇರಿದಂತೆ ಸಚಿವರು ಹಾಗೂ ಬಿಜೆಪಿ ಮುಖಂಡರ ಜೊತೆ ಹಾಕಿದ್ದ ಬ್ಯಾನರ್ ಹರಿದು ಹಾಕಿ ಮಲ್ಲೇಶ್ ಪತ್ನಿ ಸಾಧನಾ ರಂಪಾಟ ಮಾಡಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಪತಿಯ ಅನೈತಿಕ ಸಂಬಂಧದ ಬಗ್ಗೆ ಠಾಣೆಗೆ ದೂರು ನೀಡಿದ್ದರು ಆದರೆ ಇನ್ನೂ ಪೊಲೀಸರು ಎಫ್.ಐಆರ್ ದಾಖಲಿಸದ ಕಾರಣ ಇಂದು ಸಾವಿರ ಮೀಟರ್ ಉದ್ದದ ಕನ್ನಡ ಭಾವುಟ ಮೆರವಣಿಗೆ ವೇಳೆ ಪತಿಯ ಬ್ಯಾನರ್ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ವೇಳೆ ಪೊಲೀಸರು ಹಾಗೂ ಮಹಿಳೆಯ ನಡುವೆ ಮಾತಿನ ಚಕಮಕಿಯಾಗಿದ್ದು ಮಹಿಳೆಯ ಸಮಾಧಾನ ಪಡಿಸಲು ಪೊಲೀಸರು ಹರಸಾಹಸ ಪಟ್ಟರು.
ಬಿಜೆಪಿ ಮುಖಂಡ ಸೂರ್ಯಕಾಂತ್ ನಾಗಮಾರಪಳ್ಳಿ ಹಾಗೂ ಶಿವಶರಣಪ್ಪ ವಾಲಿ ಮುಂದೆ ನ್ಯಾಯಕ್ಕಾಗಿ ಮಹಿಳೆ ಕಣ್ಣೀರು ಹಾಕಿದ ಪ್ರಸಂಗವು ಈ ವೇಳೆ ನಡೆಯಿತು.
ವರದಿ: ನಂದಕುಮಾರ ಕರಂಜೆ, ಬೀದರ