ಗ್ರಾಮೀಣ ಶಾಲೆಗಳಿಗೆ ಸಂಸದರ ಅನುದಾನ ನೀಡಬೇಕು – ಈರಣ್ಣ ಕಡಾಡಿ

Must Read

ಮೂಡಲಗಿ: ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಸ್ಮಾರ್ಟ್‌ಕ್ಲಾಸ್, ಸ್ಟೆಮ್ ಲ್ಯಾಬ್, ಪೀಠೋಪಕರಣ, ಆಟದ ಸಾಮಗ್ರಿಗಳಂತ ವಸ್ತುಗಳಿಗಾಗಿ ಸಂಸದರ ಅನುದಾನ ನೀಡಿದರೆ ಅದು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಗುರುವಾರ ಫೆ-15 ರಂದು ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 2022-23ನೇ ಸಾಲಿನ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯ ಅನುದಾನದಡಿ ಪೂರೈಸಲಾದ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸಕ್ಕೆ ಪಠ್ಯ ವಿಷಯ ಮಾತ್ರವಲ್ಲದೇ ಪಠ್ಯೇತರ ವಿಷಯಗಳ ಕಲಿಕೆಯು ಅತ್ಯವಶ್ಯಕ. ಶಾಲಾ ಮಟ್ಟದಲ್ಲಿಯೇ ಕ್ರೀಡೆ, ಕಲೆ, ಸಾಹಿತ್ಯ ಸೇರಿ ವಿವಿಧ ಆಯಾಮಗಳ ಶಿಕ್ಷಣಕ್ಕೆ ಒತ್ತು ನೀಡಬೇಕಾದ ಅವಶ್ಯಕತೆ ಇದೆ ಎಂದರು.

ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧೆ ಎದುರಿಸಬೇಕಾಗಿರುವುದರಿಂದ ವಿದ್ಯಾರ್ಥಿಗಳಿಗೆ ತಂತ್ರಜ್ಞಾನವುಳ್ಳ ಕಲಿಕಾ ಶಕ್ತಿ ಹೆಚ್ಚು ಮಾಡಬೇಕಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 7 ಸರ್ಕಾರಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಸ್ಮಾರ್ಟ ಕ್ಲಾಸ್ ಅಳವಡಿಸಲಾಗಿದೆ ಎಂದರಲ್ಲದೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ನಮ್ಮ ಶಾಲೆ ಮಕ್ಕಳ ಕಲಿಕೆಯ ಗುಣಮಟ್ಟವನ್ನು ಎತ್ತರಿಸಬೇಕಾದದ್ದು ಅನಿವಾರ್ಯವಾಗಿದೆ. ಅದಕ್ಕೆ ಪೂರಕವಾಗಿ ಹೊಸ ತಂತ್ರಜ್ಞಾನವುಳ್ಳ ಶಿಕ್ಷಣ ಜಾರಿಗೊಳಿಸುವುದಕ್ಕಾಗಿ ಸ್ಟೆಮ್ ಲ್ಯಾಬ್, ಅಟಲ್ ಟಿಂಕರಿಂಗ್ ಲ್ಯಾಬ್ ಮತ್ತು ಸ್ಮಾರ್ಟ್‌ಕ್ಲಾಸ್ ಪರಿಕಲ್ಪನೆ ಮೂಡಿ ಬಂದಿದ್ದು ಅವುಗಳ ಉಪಯೋಗದಿಂದ ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೆಚ್ಚಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಪ್ರಮುಖರಾದ ಅವಣ್ಣ ಡಬ್ಬನವರ, ಸಿದ್ದಾರೂಢ ಇಂಚಲ, ಸಿದ್ದಾರ್ಥ ಅಥಣಿ, ಬಸವರಾಜ ಹುಡೇದ, ಮಹಾಂತೇಶ ರೊಡ್ಡನ್ನವರ, ಅಜೀತ ಪಾಟೀಲ, ಗಂಗಪ್ಪ ಡಬ್ಬನವರ, ಬಸಲಿಂಗ ಸೋಮನಟ್ಟಿ, ತುಕಾರಾಮ ಬಂಗೇರ, ಬಸವರಾಜ ಕರೆಬನ್ನಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಶಿವಾನಂದ ಗುಡಸಿ, ಮುಖೋಪಾಧ್ಯಯರಾದ ಎಸ್. ಜಿ. ಕುಳ್ಳೂರ, ಕೆ.ಆರ್.ಆಯ್.ಡಿ.ಎಲ್ ಎ.ಇ.ಇ ಆರತಿ ನಾರಾಯಣಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group