ಸಿಂದಗಿ ವಲಯದ ಕಾಳಿಕಾನಗರ ಕಾರ್ಯಕ್ಷೇತ್ರದಲ್ಲಿ ಪರಿಸರ ಮಾಹಿತಿ ಜಾಗೃತಿ ಕಾರ್ಯಕ್ರಮ, ಪೇರು ಗಿಡಗಳ ವಿತರಣೆ

Must Read

ಸಿಂದಗಿ – ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವತಿಯಿಂದ ಪಟ್ಟಣದ ಕಾಳಿಕಾ ನಗರ ಕಾರ್ಯಕ್ಷೇತ್ರದಲ್ಲಿ ಸಂಘದ ಸದಸ್ಯರುಗಳಿಗೆ ಪೇರು ಗಿಡ ವಿತರಣೆ ಮಾಡಲಾಯಿತು

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಪ್ರಸನ್ನ ಅವರು ಯೋಜನೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ಜೊತೆಗೆ ಪರಿಸರ ಸಂರಕ್ಷಣೆಯಲ್ಲಿ ನಾವು ವಹಿಸಬೇಕಾದ ಜವಾಬ್ದಾರಿ ಕುರಿತು ತಿಳಿಸಿದರು

ಕಾರ್ಯಕ್ರಮ ಉದ್ಘಾಟಕರಾಗಿ ಆಗಮಿಸಿದ ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾಗಿರುವಂತ ಅಶೋಕ್ ಅಲ್ಲಾಪುರ, ಉತ್ತಮ ಆರೋಗ್ಯ ವಾತಾವರಣ ಇರಬೇಕಾದ್ರೆ ಗಿಡ ಮರಗಳನ್ನು ಮಕ್ಕಳಂತೆ ಬೆಳೆಸಿ ಸಂರಕ್ಷಣೆ ಮಾಡುವ ಬಗ್ಗೆ ತಿಳಿಸಿ ಈ ವರ್ಷ ತಾಪಮಾನದಲ್ಲಾದ ಏರಿಳಿತಗಳ ಬಗ್ಗೆ ಮಾಹಿತಿ ನೀಡಿದರು

ಸಂಘದ ಸದಸ್ಯರಿಗೆ ಅವರಿಂದ ಗಿಡಗಳ ವಿತರಣೆ ಮಾಡಿಸಲಾಯಿತು ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರು ಸುರೇಶ್ ವಲಯ ಮೇಲ್ವಿಚಾರಕರು ಸಿದ್ದಪ್ಪ ಒಕ್ಕೂಟದ ಅಧ್ಯಕ್ಷರು ಅನ್ನಪೂರ್ಣ ಸೇವಾ ಪ್ರತಿನಿಧಿ ಭಾಗೀರಥಿ ಬಡಿಗೇರ್ ಸಂಘದ ಸದಸ್ಯರು ಉಪಸ್ಥಿತರಿದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group