spot_img
spot_img

ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ-ಸುಭಾಸ ಪೂಜೇರಿ

Must Read

- Advertisement -

ಮೂಡಲಗಿ: ಕಾಂಗ್ರೆಸ್ ಪಕ್ಷದಲ್ಲಿ  ಅಹಿಂದ ವರ್ಗದ ನಾಯಕ ಹಾಗೂ ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ  ಸತೀಶ ಜಾರಕಿಹೊಳಿ ಅವರಿಗೆ ಕಾಂಗ್ರೇಸ್ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಸ ಪೂಜೇರಿ ಆಗ್ರಹಿಸಿದರು.

ಪಟ್ಟಣದ ಪತ್ರಿಕಾ ಕಚೇರಿಯಲ್ಲಿ ಗುರುವಾರದಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಹೆಚ್ಚು ಶಾಸಕರು ಆಯ್ಕೆಯಾಗಲು ರಾಜಾದ್ಯಂತ ಪ್ರವಾಸ ಮಾಡಿದ ಅಹಿಂದ ವರ್ಗದ ನಾಯಕ ಸತೀಶ ಜಾರಕಿಹೊಳಿ ಶ್ರಮ ಬಹಳಷ್ಟು ಇದೆ ಎಂದ ಅವರು ರಾಜ್ಯದಲ್ಲಿ ಉಪ್ಪಾರ ಸಮಾಜದ ಏಕೈಕ ಶಾಸಕ ಪುಟ್ಟರಂಗಶೆಟ್ಟಿ ಅವರಿಗೂ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕು, ಅಪಾರ ಕಾರ್ಯಕರ್ತರೊಂದಿಗೆ  ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು ಶಾಸಕರಾಗಿ ಆಯ್ಕೆಯಾದ ಮಧು ಬಂಗಾರೆಪ್ಪ ಅವರಿಗೂ ಸಚಿವ ಸ್ಥಾನ ನೀಡಬೇಕೆಂದು ಸುಭಾಸ ಪೂಜೇರಿ ಆಗ್ರಹಿಸಿದರು. 

ಈ ಸಂದರ್ಭದಲ್ಲಿ ಕೃಷ್ಣಪ್ಪ ಸೊನ್ನದ, ರಫೀಕ್ ತಾಂಬೋಳಿ, ಕರಿಬಸಯ್ಯ ಹಿರೇಮಠ ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು

ಮೂಡಲಗಿ: ‘ಜನಪದರು ಸೇರಿ ದೈವೀಆರಾಧನೆಯೊಂದಿಗೆ ಜಾತಿ, ಧರ್ಮ, ಮೇಲು, ಕೀಳು ಭೇದ ಬಿಟ್ಟು ಸಾಮರಸ್ಯವನ್ನು ಬೆಳೆಸುವುದೇ ಜಾತ್ರೆಗಳಾಗಿವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group