spot_img
spot_img

ಸಾವಿತ್ರಿಬಾಯಿ ಫುಲೆ ಮಹಿಳೆಯರಿಗೆ ಸ್ಫೂರ್ತಿ

Must Read

- Advertisement -

ಮೂಡಲಗಿ -ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಹೊಸದಾಗಿ ವೃತ್ತಕ್ಕೆ ಸಾವಿತ್ರಿ ಬಾಯಿ ಫುಲೆ ನಾಮಕರಣ ಮಾಡಲಾಯಿತು.

ಬಡವ ದಿನ ದಲಿತರ ಹಿಂದುಳಿದ ವರ್ಗದ ಜನರಿಗೆ ಶಿಕ್ಷಣವನ್ನು ನೀಡಿ ಅವರ ಬಾಳಿಗೆ ಬೆಳಕು ನೀಡಿ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ವೃತ್ತಕ್ಕೆ ಹೆಸರು ಇಟ್ಟಿರುವುದು ಸಮಾಜಕ್ಕೆ ನೀಡಿರುವ ಅವರ ಕೊಡುಗೆ ಅಪಾರವಾದದ್ದು ಎಂದು ಭರತೇಶ ಉಪಾದ್ಯೆ ಪೂಜೆ ನೆರವೇರಿಸಿ ಮಂಗಳಾರತಿ ಮಾಡಿ ಮಾತನಾಡಿದರು.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಂಗಣ್ಣ ಗುಜನಟ್ಟಿ ಮಾತನಾಡಿ ಸಾವಿತ್ರಿ ಬಾಯಿ ಫುಲೆ ಅವರು ಜಾತಿ ಭೇದ ಭಾವ ಮಾಡದೆ ಎಲ್ಲರಿಗೂ ಸಮಾಜದಲ್ಲಿ ಮಾದರಿಯಾಗಿದ್ದಾರೆ. ಶಾಲೆಯ ಹತ್ತಿರ ಸಾವಿತ್ರಿ ಬಾಯಿ ಫುಲೆ ವೃತ್ತ ಆದದ್ದು ಹೆಮ್ಮೆಯ ಸಂಗತಿಯಾಗಿದೆ. ಇವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

- Advertisement -

ಗ್ರಾಮ ಆಡಳಿತ ಅಧಿಕಾರಿ ಸಂಜು ಅಗ್ನೆಪ್ಪಗೋಳ ಮಾತನಾಡಿ ಸಾವಿತ್ರಿ ಬಾಯಿ ಫುಲೆ ಅವರು ಶಿಕ್ಷಣ ಕಲಿಸಲು ದಾರಿಯಲ್ಲಿ ಹೊರಟಾಗ ಕೆಟ್ಟ ಜನರು ಸಗಣಿ, ಕಲ್ಲು ಎಸೆಯುತ್ತಿದ್ದರು ಮಾನ ಅಪಮಾನಕ್ಕೆ ಹೆದರದೆ ಮುನ್ನಡೆದು ಶಿಕ್ಷಣ ನೀಡಿ ಶಿಕ್ಷಣದ ಕ್ರಾಂತಿಯನ್ನು ಮಾಡಿದ್ದಾರೆ ಎಂದು ಹೇಳಿದರು.

ಪ್ರಾರಂಭದಲ್ಲಿ ಸಾವಿತ್ರಿ ಬಾಯಿ ಫುಲೆ ಅವರ ವೃತ್ತ ಫಲಕದ ಅನಾವರಣ ಪೂಜಾ ಸಮಾರಂಭವು, ಪುಷ್ಪ ನಮನ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ ನಡೆಯಿತು. ಈ ಸಮಯದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲವ್ವ ಹೊಸಟ್ಟಿ.ಮಾಜಿ ಜಿ ಪಂ ಸದಸ್ಯೆ ವಾಸಂತಿ ತೇರದಾಳ. ಮಾ,ಜಿ,ಪಂ ಸದಸ್ಯ ಭೀಮಶಿ ಮಗದುಮ. ಮಾ, ತಾ ಪಂ ಸದಸ್ಯೆ ಸವಿತಾ ಡಬ್ಬನ್ನವರ, ಸಾವಿತ್ರಿ ಬಾಯಿ ಫುಲೆ ಮಹಿಳಾ ಮಂಡಳ ಅಧ್ಯಕ್ಷೆ ಬಂದವ್ವ ಕಾಗೆ, ಉಪಾಧ್ಯಕ್ಷೆ ಕಸ್ತೂರಿ ನಿಡೋಣಿ.ಮಾ ಗ್ರಾಂ ಪ ಅಧ್ಯಕ್ಷ ಲಕ್ಷ್ಮಣ ಕತ್ತಿ, ಅರ್ಚಕ ಪಾವಡೆಪ್ಪ ಪೂಜೆರಿ, ಗ್ರಾಂ ಪ ಸದಸ್ಯ ಮಾದೇವ ಹೊಸಟ್ಟಿ, ಪಶು ವೈದ್ದಾಧಿಕಾರಿಗಳಾದ ವಿಶ್ವನಾಥ ಹುಕ್ಕೇರಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ, ಮುಖಂಡರಾದ ಯಮನಪ್ಪ ನಿಡೋಣಿ, ಸಿದ್ದಪ್ಪ ಕೂಲಿಗೋಡಭೀಮಪ್ಪ ಹೊಸಟ್ಟಿ,ಅಡಿವೆಪ್ಪ ಪಾಲಬಾಂವಿ, ಹನಮಂತ ತೇರದಾಳ, ಶಂಕರ ಬೋಳನ್ನವರ, ಸುರೇಶ ಕತ್ತಿ, ಮುತ್ತಪ್ಪ ಲಿಗಾಡೆ, ಹನಮಂತ ಹಳ್ಳೂರ,ದುಂಡಪ್ಪ ಕುಲಿಗೋಡ, ಸತ್ಯೆಪ್ಪ ಮರಿಚಂಡಿ, ಪ್ರಧಾನ ಗುರುಗಳು‌ ಸರ್ಕಾರಿ ಶಾಲೆಯ ಎಸ್. ಎಚ್. ವಾಸನ,ದುಂಡಪ್ಪ ಕತ್ತಿ, ಶಾನೂರ ಹರಿಜನ,ರಾಮಣ್ಣ ಹೊಸೂರ,ಇಬ್ರಾಹಿಂ ಮುಜಾವರ, ಗೋಪಾಲ ಅಟ್ಟಮಟ್ಟಿ, ರಮೇಶ ಸವದಿ, ಲಕ್ಷ್ಮಣ ಕೌಜಲಗಿ, ಸೈದುಸಾಬ ಮುಜಾವರ,ಕಲ್ಲಪ್ಪ ಹುಬ್ಬಳ್ಳಿ ಸೇರಿದಂತೆ ಗ್ರಾಮದ ಗುರು ಹಿರಿಯರು ವಿದ್ಯಾರ್ಥಿಗಳು, ಶಿಕ್ಷಕ ಶಿಕ್ಷಕಿಯರು,ಹಾಗೂ ಸಾವಿತ್ರಿ ಬಾಯಿ ಫುಲೆ ಮಹಿಳಾ ಮಂಡಳ ಸದಸ್ಯರಿದ್ದು ಸರ್ವರಿಗೂ ಅಲ್ಪೋಪಹಾರ ವ್ಯವಸ್ಥೆ ನಡೆಯಿತು.

 

- Advertisement -
- Advertisement -

Latest News

ತತ್ವಬೋಧನೆಗೆ ಮಠಗಳು ಸಿದ್ಧವಾಗಬೇಕು – ಬಿಇಓ ಯಡ್ರಾಮಿ

ಸಿಂದಗಿ: ಆರ್ಥಿಕ ಸಬಲತೆಯ ಮಠಗಳಾಗದೇ ತತ್ವಭೋಧನೆಗೆ ಮಠಗಳು ಸಿದ್ಧವಾಗಬೇಕು. ಶಾಲೆಗಳಲ್ಲಿ ಶಿಸ್ತು ಮತ್ತು ಶಿಕ್ಷಣ ಕಲಿಯಬಹುದು ಮಠಗಳಿಂದ ಆಧ್ಯಾತ್ಮಿಕತೆ ಮತ್ತು ಸಂಸ್ಕಾರ ಸಿಗುವುದು ಅಲ್ಲದೆ ವಿದೇಶಗಳಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group