ಶಿವಾಪೂರದಲ್ಲಿ ಸಾವಿತ್ರಿ ಬಾಯಿ ಫುಲೆ ಜಯಂತ್ಯುತ್ಸವ

Must Read

ಮೂಡಲಗಿ – ಶಿವಾಪೂರ ಹ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಶಿವಾಪೂರ (ಹ) ದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜಯಂತ್ಯುತ್ಸವ ಕಾರ್ಯಕ್ರಮ ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಗುರುಗಳಾದ ಚಿದಾನಂದ ಮ ಹೂಗಾರ ರವರು ಪ್ರಸ್ತುತ ಸನ್ನಿವೇಶದಲ್ಲಿ ಸ್ತ್ರೀ ಶಿಕ್ಷಣ ಬಹಳ ಅವಶ್ಯಕವಾಗಿದೆ.ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅಂದಿನ ಸಮಾಜದ ಸಾಕಷ್ಟು ನಿಂದನೆ ಅಪಮಾನ ಸಹಿಸಿಕೊಂಡು ಸ್ತ್ರೀ ಶಿಕ್ಷಣಕ್ಕೆ ಮುನ್ನುಡಿ ಬರೆದ ಮಹಾನ್ ಮಹಿಳಾ ಶಿಕ್ಷಕಿಯಾಗಿ ಎಲ್ಲರಿಗೂ ಆದರ್ಶಪ್ರಾಯರಾದರು ಎಂದು ಹೇಳಿದರು.

ಶಾಲಾ ಮಕ್ಕಳು ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ವೇಷಭೂಷಣ ತೊಟ್ಟು ಬಂದು ಭಾಷಣ ಮಾಡುವ ಮೂಲಕ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.

ಗುರುಮಾತೆಯರು ಸಾವಿತ್ರಿಬಾಯಿ ಫುಲೆಯವರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ರಾಜೇಶ್ವರಿ ಜಕಾತಿ, ಸಾವಿತ್ರಿ ಜುಟನಟ್ಟಿ,ರೂಪಾ ಯಂಡ್ರಾವಿ, ರಾಜೇಶ್ವರಿ ದುರದುಂಡಿ, ಮಹಾದೇವಿ ತಮದಡ್ಡಿ ,ಈರವ್ವ ಸುಣಧೋಳಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಡಿವೆಪ್ಪ ತುಪ್ಪದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group