ಮೂಡಲಗಿ: ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ಮಿಸಲಾತಿ ಪ್ರಮಾಣ ಹೆಚ್ಚಳ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ದಾಸ್ ಏಕ ಸದಸ್ಯ ಸಮಿತಿ ವರದಿ ಸಲ್ಲಿಸಿದ್ದು ಅದರ ಅನುಷ್ಠಾನಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ತಾಲೂಕಾ ಘಟಕದ ಪದಾಧಿಕಾಗಳು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿ ಎರಡು ವರ್ಷಗಳಾದರೂ ಅಗತ್ಯ ಕ್ರಮ ಕೈಗೊಂಡಿಲ್ಲ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀಗಳು ಕಳೆದ 100 ದಿನಗಳಿಂದ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಮಿಸಲು ಜಾರಿಗೊಳಿಸಬೇಕೆಂದು ಮಾಡುತ್ತಿರುವ ಸತ್ಯಾಗ್ರಹಕ್ಕೆ ಕೂಡ ಸರ್ಕಾರ ಸ್ಪಂದಿಸುತ್ತಿಲ್ಲ. ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣಪತ್ರ ಪಡೆಯುವವರ ಮೇಲೆ ಹಾಗೂ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.ಪರಿಶಿಷ್ಟ ಜಾತಿಗೆ ಶೇ.15ರಿಂದ 17ಕ್ಕೆ, ಪರಿಶಿಷ್ಟ ಪಂಗಡಕ್ಕೆ ಶೇ.3ರಿಂದ 7.5ರಷ್ಟು ಮಿಸಲಾತಿ ಹೆಚ್ಚಿಸಬೇಕು. ಶೈಕ್ಷಣಿಕವಾಗಿ, ಸರಕಾರದ ನೇಮಕಾತಿ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಏಕಸದಸ್ಯ ಆಯೋಗದ ವರದಿಯನ್ನು ಕೂಡಲೇ ಜಾರಿ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅರಭಾವಿ ಬ್ಲಾಕ್ ಎಸ್ ಟಿ ಯುವ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ಪುರಸಭೆ ಸದಸ್ಯ ಆನಂದ ಟಪಾಲದಾರ, ಚಂದ್ರಕಾಂತ ಪೂಜೇರಿ, ಪುಂಡಲೀಕ ಹೊಸಟ್ಟಿ, ಸಂತೋಷ ಕದಂ, ಮಾರುತಿ ಜಂಗಪ್ಪಗೋಳ, ಮಲ್ಲಪ್ಪ ದಳವಾಯಿ, ಬಿ ಎಚ್ ಹುಲ್ಯಾಳ, ಉದ್ದಪ್ಪ ಗುಡದಾರ, ರಾಜರತ್ನ ಹಂಚಿನಾಳ, ಅಶೋಕ ಮಾದರ ಇದ್ದರು.