- Advertisement -
ಬನವಾಸಿ: ರಾಣಿಬೆನ್ನೂರಿನಿಂದ ಶಿರಸಿ ಕಡೆಗೆ ಪ್ರಯಾಣಿಸುತ್ತಿದ್ದ ಮಿನಿ ಶಾಲಾ ಬಸ್ ಪಲ್ಟಿಯಾಗಿ ಒಬ್ಬರು ಮೃತಪಟ್ಟು 12ಜನ ಗಾಯಗೊಂಡ ಘಟನೆ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 766(ಇ) ಕುಮಟಾ-ಹಾವೇರಿ ಮಾರ್ಗ ಮಧ್ಯೆ ಬುಗಡಿಕೊಪ್ಪ ಗ್ರಾಮದ ಭೂತೇಶ್ವರ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ.
ಅಪಘಾತವಾದ ಬಸ್ ರಾಣಿಬೆನ್ನೂರಿನ ಸಿದ್ಧಾರೂಢ ನಗರದ ಪರಿಣಿತಿ ವಿದ್ಯಾಮಂದಿರದ ಶಾಲಾ ಬಸ್ ಆಗಿದ್ದು ಶಾಲಾ ಸಿಬ್ಬಂದಿಗಳು ಶಿರಸಿ ಮಾರಿಕಾಂಬಾ ದೇವಿಯ ದರ್ಶನಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
- Advertisement -
ಅಪಘಾತದಲ್ಲಿ ಶಾಲಾ ಸಿಬ್ಬಂದಿ ಕಸ್ತೂರಮ್ಮ(50)ಮೃತಪಟ್ಟಿದ್ದು 12ಜನ ಗಾಯಗೊಂಡಿದ್ದಾರೆ. ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಹನುಮಂತ ಬಿರಾದಾರ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.