ಸತೀಶ ಶುಗರ‍್ಸ್ ಕಾರ್ಖಾನೆಯಲ್ಲಿ ಕಬ್ಬಿನಲ್ಲಿ ಗೊಣ್ಣೆಹುಳು ನಿರ್ವಹಣೆ ಕುರಿತು ವಿಚಾರ ಸಂಕಿರಣ

Must Read

ಮೂಡಲಗಿ: ಕಬ್ಬಿನಲ್ಲಿ ಬೆಳೆಯಲ್ಲಿನ ಗೊಣ್ಣೆಹುಳು ನಿರ್ವಹಣೆಯನ್ನು ರೈತರು ಕೃಷಿ ತಜ್ಞ ಹಾಗೂ ಬೆಳೆಗಳ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಬೆಳೆಗಳ ನಿರ್ವಹಣೆಯ ಮಾಹಿತಿ ಪಡೆದುಕೊಂಡು ಬೆಳೆಗಳಿಗೆ ಕೀಟ ಭಾಧೆ ಬರದಂತೆ ತಡೆದರೆ ಹೆಚ್ಚು ಇಳುವರಿ ಪಡೆಯಲು ಸಾಧ್ಯ ಎಂದು ಬೆಳಗಾವಿಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಚ್.ಡಿ.ಕೋಳೆಕರ ಹೇಳಿದರು

ಅವರು ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ‍್ಸ್ ಕಾರ್ಖಾನೆ ಹಾಗೂ ಕೃಷಿ ಇಲಾಖೆ ಆಶ್ರಯದಲ್ಲಿ ಸತೀಶ ಶುಗರ‍್ಸ್ ಕಾರ್ಖಾನೆಯ ಸಭಾಭವನದಲ್ಲಿ ಜರುಗಿದ ಕಬ್ಬಿನಲ್ಲಿ ಗೊಣ್ಣೆಹುಳು ನಿರ್ವಹಣೆ ಕುರಿತು ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೃಷಿಯ ಉಪಯೋಗ ಮತ್ತು ಗೊಣ್ಣೆ ಹುಳುವಿನ ಜೀವನ ಚಕ್ರದ ಕುರಿತು ವಿವರಿಸಿದರು.

ಸತೀಶ ಶುಗರ‍್ಸ್ ಕಾರ್ಖಾನೆಯ ಕಬ್ಬು ಅಭಿವೃದ್ದಿ ವಿಭಾಗದ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಸಸಾಲಟ್ಟಿ ಮಾತನಾಡಿ, ಕಬ್ಬಿನ ಬೆಳೆಯಲ್ಲಿ ಅಧಿಕ ಇಳುವರಿ ಪಡೆಯಲು ಹಾಗೂ ಕೀಟ ಬಾಧೆಯನ್ನು ನಿಯಂತ್ರಿಸಲು ಕಾರ್ಖಾನೆಯಿಂದ ಏರ್ಪಡಿಸುವ ಕೃಷಿ ವಿಚಾರ ಸಂಕಿರಣದಲ್ಲಿ ರೈತರು ಭಾಗವಹಿಸಿ ಕೃಷಿ ತಜ್ಞರಿಂದ ಮಾಹಿತಿ ಪಡೆದು ಬೆಳೆಗಳಲ್ಲಿ ಅಧಿಕ ಇಳುವರಿ ಪಡೆದು ಆರ್ಥಿಕವಾಗಿ ಸದೃಢರಾಗಬೇಕೆಂದರು.

ಮತ್ತಿಕೊಪ್ಪದ ಕೆಎಲ್‌ಇ ಕೆವಿಕೆಯ ಮುಖ್ಯಸ್ಥರು ಮತ್ತು ಕೀಟ ಶಾಸ್ತ್ರಜ್ಞ ಡಾ.ಮಂಜುನಾಥ ಚೌರಡ್ಡಿ ಅವರು ಗೊಣ್ಣೆಹುಳುವಿನ ಭಾದೆ ಮತ್ತು ಪ್ರತಿ ಎಕರೆಗೆ ಅವಶ್ಯಕ ಪ್ರಮಾಣದಲ್ಲಿ ಮೆಟರಾಜಿಯಂ ಬಳಸಿ ಗೊಣ್ಣೆಹುಳುವಿನ ನಿರ್ವಹಣೆ ಮಾಡಬಹುದು ಎಂಬುದರ ಕುರಿತು ರೈತಬಾಂಧವರಿಗೆ ಮತ್ತು ಕಬ್ಬು ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಚಿಕ್ಕೋಡಿ ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ.ಸಹದೇವ ಯರಗೊಪ್ಪ ಅವರು ಮಣ್ಣು ನಿರ್ವಹಣೆ ಕುರಿತು, ಗೋಕಾಕ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಮ್.ಎಮ್.ನದಾಫ್ ಅವರು ಕಬ್ಬಿನ ಕ್ಷೇತ್ರದ ಕುರಿತು ಮಾಹಿತಿ ನೀಡಿದರು

ಕಾರ್ಯಕ್ರಮದ ವೇದಿಕೆಯಲ್ಲಿ ಕೃಷಿ ಇಲಾಖೆಯ ಮಂಜುನಾಥ ಕಿತ್ತೂರ, ಲೀಲಾವತಿ ಕೌಜಗೆರಿ, ಸಿ.ಆಯ್.ಹೂಗಾರ ಹಾಗೂ ಕಾರ್ಖಾನೆಯ ಕಬ್ಬು ಅಭಿವೃದ್ದಿ ವಿಭಾಗದ ಹಿರಿಯ ವ್ಯವಸ್ಥಾಪಕ ಲಕ್ಷ್ಮಣ ರೊಡ್ಡನವರ ಉಪಸ್ಥಿತರಿದ್ದರು. ವಿಚಾರ ಸಂಕಿರಣದಲ್ಲಿ ಸುಮಾರು ೩೦೦ ಕ್ಕಿಂತ ಹೆಚ್ಚು ರೈತ ಬಾಂಧವರು ಪಾಲ್ಗೊಂಡಿದ್ದರು.

ಕಾರ್ಖಾನೆಯ ಕಬ್ಬು ಅಭಿವೃದ್ದಿ ವಿಭಾಗದ ಸಹಾಯಕ ವ್ಯವಸ್ಥಾಪಕ ಆರ್.ಆರ್. ದಪ್ತರದಾರ ಸ್ವಾಗಸಿದರು, ಸಹಾಯಕ ವ್ಯವಸ್ಥಾಪಕ ಪರವಯ್ಯಾ ಪೂಜೇರಿ ನಿರೂಪಿಸಿದರು. ಉಪವ್ಯವಸ್ಥಾಪಕ ನಿಂಗಪ್ಪ ರಡರಟ್ಟಿ ವಂದಿಸಿದರು.

Latest News

ವಿದ್ಯಾರ್ಥಿಗಳು ತಂತ್ರಜ್ಞಾನದಿಂದಾಗಿ ದಾರಿ ತಪ್ಪಬಾರದು – ಲಕ್ಷ್ಮಿ ಸಾಲೊಡಗಿ

ಸಿಂದಗಿ - ಇಂದಿನ ಯುವ ಜನಾಂಗ ಮೊಬೈಲ್ ಅವಲಂಬಿತ ಜಗತ್ತಿನಲ್ಲಿದೆ. ಎಲ್ಲವೂ ಅಂಗೈನಲ್ಲಿಯೇ ಹಿಡಿದಿಟ್ಟುಕೊಳ್ಳುವ ಮನೋಭಾವದ ವಯಸ್ಸಿನ ಹದಿ ಹರೆಯದವರು ತಂತ್ರಜ್ಞಾನಗಳ ಪ್ರಭಾವಕ್ಕೆ ಒಳಗಾಗಿ ಹಾದಿ...

More Articles Like This

error: Content is protected !!
Join WhatsApp Group