spot_img
spot_img

೮ ಮನೆಗಳಲ್ಲಿ ಸರಣಿಗಳ್ಳತನ ; ಬೆಚ್ಚಿಬಿದ್ದ ಗ್ರಾಮಸ್ಥರು

Must Read

spot_img
- Advertisement -

ಬೀದರ – ಬೈಕ್ ನಲ್ಲಿ ಬಂದ ಕಳ್ಳರು ಒಂದೇ ರಾತ್ರಿಯಲ್ಲಿ ೮ ಕ್ಕೂ ಹೆಚ್ಚು ಮನೆಗಳ ಬೀಗ ಮುರಿದು ಮನೆಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನಗ ನಾಣ್ಯ ಲೂಟಿ ಮಾಡಿರುವ ಪ್ರಕರಣ ಬಸವಕಲ್ಯಾಣ ತಾಲೂಕಿನ ಉಮ್ಮಾಪುರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಚಾಲಾಕಿ ಕಳ್ಳರು ಮನೆ ಲೂಟಿ ಮಾಡಿದ ನಂತರ ಹೊರಗಿನಿಂದ ಬೀಗ ಹಾಕಿ ಪರಾರಿಯಾಗಿದ್ದಾರೆ. ಈ ಸರಣಿ ಕಳ್ಳತನದಿಂದ ಗ್ರಾಮಸ್ಥರು ಬೆಚ್ಚಿಬೀಳುವಂತಾಗಿದೆ.

ನಸುಕಿನ ಜಾವ ಮೂರು ಗಂಟೆಗೆ ಮುಖಕ್ಕೆ ಮಾಸ್ಕ್ ಹಾಕಿದ್ಧ ಕಳ್ಳರ ಚಲನವಲನ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಉಮ್ಮಾಪುರ ಗ್ರಾಮದಲ್ಲಿ ೬ ಮನೆಗಳು ಹಾಗೂ ಕೊಂಗೆವಾಡಿ ತಾಂಡಾ, ಚಂಡಿಕಾಪುರ ಗ್ರಾಮದಲ್ಲಿ ತಲಾ ಒಂದೊಂದು ಮನೆಯಲ್ಲಿ ಕಳ್ಳತನವಾಗಿದೆ.
ಉಮ್ಮಾಪುರ ಗ್ರಾಮದಲ್ಲಿ ರೂ. ೨.೭೭ ಲಕ್ಷ ಹಾಗೂ ಇತರೆ ಎರಡು ಕಡೆ ರೂ. ೧.೧೦ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಕದ್ದೊಯ್ದಿದ್ದು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ವರದಿ : ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group