ರಾಜ್ಯಮಟ್ಟದ ಕವಿಗೋಷ್ಠಿಗೆ ಶಿವಾನಂದ ಪಟ್ಟಿಹಾಳ ಆಯ್ಕೆ

Must Read

ಹುಣಶ್ಯಾಳ ಪಿ.ವಾಯ್.- ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ‌.ವಾಯ್. ಗ್ರಾಮದ ಆರೂಢಜ್ಯೋತಿ ಚೈತನ್ಯ ಶಾಲೆಯ ಕೋಚಿಂಗ್ ವಿಭಾಗದ ಶಿಕ್ಷಕ, ಉದಯೋನ್ಮುಖ ಕವಿ,ಬರಹಗಾರ,ಸಂಘಟಕ ಶಿವಾನಂದ ಬಸನಾಯ್ಕ ಪಟ್ಟಿಹಾಳ(ಇಂಚಲ) ಅವರು ನವೆಂಬರ 23 ರಂದು ಬೆಂಗಳೂರು ಕೇಂದ್ರ ಬಸವ ಸಮಿತಿಯಿಂದ ಬೈಲಹೊಂಗಲದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಮಟ್ಟದ ಕವಿಗೋಷ್ಠಿಯ ಮುಖ್ಯ ಸಂಯೋಜಕರಾದ, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆಯಾದ ಶಿವಾನಂದ ಬಸನಾಯ್ಕ ಪಟ್ಟಿಹಾಳ ಅವರನ್ನು ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಪ್ರಧಾನ ಗುರುಗಳು ಹಾಗೂ ಸಹೋದ್ಯೋಗಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಸುಕ್ಷೇತ್ರ ಇಂಚಲ ಸಾಧು ಸಂಸ್ಥಾನ ಮಠದ ಆಡಳಿತಾಧಿಕಾರಿಗಳಾದ ಪೂಜ್ಯ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿ ಅವರು ಕವನಗಳು ಚೆನ್ನಾಗಿ ರಚನೆಯಾಗಿವೆ ಆದಷ್ಟು ಶೀಘ್ರವಾಗಿ ಕವನ ಸಂಕಲನ ಬಿಡುಗಡೆಯಾಗುವಂತಾಗಲಿ ಎಂದು ಶುಭ ಕೋರಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group