ಶೃದ್ಧಾಂಜಲಿ ಹಾಗೂ ಸನ್ಮಾನ ಸಮಾರಂಭ

Must Read

ಸವದತ್ತಿಃ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಸವದತ್ತಿ ವತಿಯಿಂದ ಇಂದು ಸಂಜೆ ೪ ಗಂಟೆಗೆ ಶ್ರೀ ಚಿದಂಬರೇಶ್ವರ ದೇವಸ್ಥಾನ ಗುರ್ಲಹೊಸೂರಿನಲ್ಲಿ  ಅಗಲಿದ ಹಿರಿಯ ಚೇತನಗಳಾದ ನಾಡೋಜ ಚನ್ನವೀರ ಕಣವಿ,ಬಂಡಾಯ ಸಾಹಿತಿ ಚಂದ್ರಶೇಖರ ಪಾಟೀಲ,ಇಬ್ರಾಹಿಂ ಸುತಾರ ಹಾಗೂ ಬಸಲಿಂಗಯ್ಯ ಹಿರೇಮಠ ಇವರುಗಳಿಗೆ ಶೃದ್ಧಾಂಜಲಿ ಹಾಗೂ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತರೂ ಸವದತ್ತಿ ತಾಲೂಕಿನ ಮುನವಳ್ಳಿಯವರಾದ ಡಾ.ಬಸು ಬೇವಿನಗಿಡದ, ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಅಶೋಕ ಮಳಗಲಿ, ಸವದತ್ತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಯಕ್ಕುಂಡಿಯ ಸರ್ಕಾರಿ ಕಾಲೇಜಿನ ಪ್ರಾಚಾರ್ಯರಾದ ಡಾ.ವೈ.ಎಂ.ಯಾಕೊಳ್ಳಿಯವರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಚಿದಂಬರೇಶ್ವರ ದೇವಸ್ಥಾನದ ಶ್ರೀ ದಂಡಪಾಣಿ ದೀಕ್ಷಿತರು ವಹಿಸಿಕೊಳ್ಳಲಿದ್ದು. ಅಧ್ಯಕ್ಷತೆಯನ್ನು ಚುಟುಕು ಸಾಹಿತ್ಯ ಪರಿಷತ್ ತಾಲೂಕು ಘಟಕ ಸವದತ್ತಿಯ ಅಧ್ಯಕ್ಷರಾದ ಜಿ.ವಾಯ್.ಕರಮಲ್ಲಪ್ಪನವರ ವಹಿಸುವರು. ಮುಖ್ಯ ಅತಿಥಿಗಳಾಗಿ ಸವದತ್ತಿಯ ಖ್ಯಾತ ವೈದ್ಯರು ಚುಟುಕು ಸಾಹಿತಿಗಳು ಡಾ.ಅಭಿನಂದನ ಕಬ್ಬಿಣ ಹಾಗೂ ಗೌರವಾನ್ವಿತ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಬಿ.ವ್ಹಿ.ಬಿ.ನರಗುಂದ ಉಪಸ್ಥಿತರಿರುವರು ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್.ದೊಡಮನಿ ಹಾಗೂ ರಮೇಶ ಮುರಂಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group