Homeಸುದ್ದಿಗಳುಶ್ರೀ ರಾಮೇಶ್ವರ ಉತ್ಸವ ಹಾಡಿನ ಧ್ವನಿಸುರುಳಿ ಬಿಡುಗಡೆಗೆ ಕ್ಷಣ ಗಣನೆ 

ಶ್ರೀ ರಾಮೇಶ್ವರ ಉತ್ಸವ ಹಾಡಿನ ಧ್ವನಿಸುರುಳಿ ಬಿಡುಗಡೆಗೆ ಕ್ಷಣ ಗಣನೆ 

ತೀರ್ಥಹಳ್ಳಿ: ಇಲ್ಲಿನ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಇದೇ ದಿ. 3ರಂದು ಬೆಳ್ಳಿಗ್ಗೆ  11 ಗಂಟೆಗೆ  ಕವಿ  – ಅನಂತ ಕಲ್ಲಾಪುರ ತೀರ್ಥಹಳ್ಳಿ ಇವರ ಸಾಹಿತ್ಯದಲ್ಲಿ ಮೂಡಿಬರಲಿರುವ ಮಲೆನಾಡ ಕೋಗಿಲೆ ಗರ್ತಿಕೆರೆ ರಾಘಣ್ಣ ಇವರ ರಾಗ ಸಂಯೋಜನೆಯಲ್ಲಿ ರಾಘವೇಂದ್ರ ಡಿ.ಜಿ.ಮತ್ತು ತಂಡ ತೀರ್ಥಳ್ಳಿ ಇವರ ಗಾಯನದಲ್ಲಿ ಎಸ್.ಯು ಮ್ಯೂಸಿಕ್ ಕುಂದಾಪುರ ಇವರ ಸಂಗೀತ ಸಂಯೋಜನೆ ಯ ಬಿಡುಗಡೆಯಾಗಲಿರುವ ಶ್ರೀ ರಾಮೇಶ್ವರ ಉತ್ಸವ ಉತ್ಸವ ಹಾಡಿನ ಧ್ವನಿಸುರುಳಿಯನ್ನು  ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ಧ್ವನಿಸುರುಳಿಯನ್ನು ಬಿಡುಗಡೆ ಮಾಡುವರು.

ಈ ಕಾರ್ಯಕ್ರಮದಲ್ಲಿ ಜಾತ್ರಾ ಸಮಿತಿ ಮತ್ತು ಪಟ್ಟಣ ಪಂಚಾಯತ್ ಸದಸ್ಯರಾದ ರಾಘವೇಂದ್ರ ಸೊಪ್ಪು ಗುಡ್ಡೆ,  ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೆಸ್ತೂರು ಮಂಜುನಾಥ್ ,ತೀರ್ಥಹಳ್ಳಿ ಭಾಜಪ ಅಧ್ಯಕ್ಷರಾದ ರಾಘವೇಂದ್ರ ನಾಯಕ್ , ರಂಗಾಯಣ ನಿರ್ದೇಶಕರು ಮತ್ತು ಪಟ್ಟಣ ಪಂಚಾಯತ್ ಸದಸ್ಯರಾದ ಸಂದೇಶ್ ಜವಳಿ, ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಗಣೇಶ್ ಪ್ರಸಾದ್  ಮತ್ತು ತೀರ್ಥಳ್ಳಿ ಭಾಜಪ ಯುವ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ದೇವಾಡಿಗ ಉಪಸ್ಥಿತರಿರುವರು.

ಅನಂತ ಕಲ್ಲಾಪುರ ತೀರ್ಥಹಳ್ಳಿ 

RELATED ARTICLES

Most Popular

error: Content is protected !!
Join WhatsApp Group