ತೀರ್ಥಹಳ್ಳಿ: ಇಲ್ಲಿನ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಇದೇ ದಿ. 3ರಂದು ಬೆಳ್ಳಿಗ್ಗೆ 11 ಗಂಟೆಗೆ ಕವಿ – ಅನಂತ ಕಲ್ಲಾಪುರ ತೀರ್ಥಹಳ್ಳಿ ಇವರ ಸಾಹಿತ್ಯದಲ್ಲಿ ಮೂಡಿಬರಲಿರುವ ಮಲೆನಾಡ ಕೋಗಿಲೆ ಗರ್ತಿಕೆರೆ ರಾಘಣ್ಣ ಇವರ ರಾಗ ಸಂಯೋಜನೆಯಲ್ಲಿ ರಾಘವೇಂದ್ರ ಡಿ.ಜಿ.ಮತ್ತು ತಂಡ ತೀರ್ಥಳ್ಳಿ ಇವರ ಗಾಯನದಲ್ಲಿ ಎಸ್.ಯು ಮ್ಯೂಸಿಕ್ ಕುಂದಾಪುರ ಇವರ ಸಂಗೀತ ಸಂಯೋಜನೆ ಯ ಬಿಡುಗಡೆಯಾಗಲಿರುವ ಶ್ರೀ ರಾಮೇಶ್ವರ ಉತ್ಸವ ಉತ್ಸವ ಹಾಡಿನ ಧ್ವನಿಸುರುಳಿಯನ್ನು ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ಧ್ವನಿಸುರುಳಿಯನ್ನು ಬಿಡುಗಡೆ ಮಾಡುವರು.
ಈ ಕಾರ್ಯಕ್ರಮದಲ್ಲಿ ಜಾತ್ರಾ ಸಮಿತಿ ಮತ್ತು ಪಟ್ಟಣ ಪಂಚಾಯತ್ ಸದಸ್ಯರಾದ ರಾಘವೇಂದ್ರ ಸೊಪ್ಪು ಗುಡ್ಡೆ, ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೆಸ್ತೂರು ಮಂಜುನಾಥ್ ,ತೀರ್ಥಹಳ್ಳಿ ಭಾಜಪ ಅಧ್ಯಕ್ಷರಾದ ರಾಘವೇಂದ್ರ ನಾಯಕ್ , ರಂಗಾಯಣ ನಿರ್ದೇಶಕರು ಮತ್ತು ಪಟ್ಟಣ ಪಂಚಾಯತ್ ಸದಸ್ಯರಾದ ಸಂದೇಶ್ ಜವಳಿ, ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಗಣೇಶ್ ಪ್ರಸಾದ್ ಮತ್ತು ತೀರ್ಥಳ್ಳಿ ಭಾಜಪ ಯುವ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ದೇವಾಡಿಗ ಉಪಸ್ಥಿತರಿರುವರು.
ಅನಂತ ಕಲ್ಲಾಪುರ ತೀರ್ಥಹಳ್ಳಿ