spot_img
spot_img

ನಿಮ್ಮ ತಾತ ಮುತ್ತಾತ ಬಂದರೂ ಶ್ರೀ ರಾಮನ ಹಾಡು ನಿಲ್ಲಿಸೋದಕ್ಕೆ ಆಗಲ್ಲ – ಶಾಸಕ ಶರಣು ಸಲಗರ

Must Read

- Advertisement -

ಬೀದರ – ಬಸವಕಲ್ಯಾಣದ ಗುರುನಾನಕ ಕಾಲೇಜಿನಲ್ಲಿ ಶ್ರೀ ರಾಮನ ಹಾಡು ಹಾಡಿದ ವಿದ್ಯಾರ್ಥಿಗಳ ಮೇಲೆ ಕೇಸು ದಾಖಲಿಸಿದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ ಶಾಸಕ ಶರಣು ಸಲಗರ, ನಿಮ್ಮ ತಾತ ಮುತ್ತಾತ ಬಂದರೂ ರಾಮನ ಹಾಡನ್ನು ನಿಲ್ಲಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಗುರುನಾನಕ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಶ್ರೀ ರಾಮನ ಹಾಡು ಹಾಡಿದ್ದಕ್ಕೆ ಅವರ ಮೇಲೆ ಕೇಸು ದಾಖಲಿಸಿದ್ದು ಹಾಗೂ ಸ್ಥಳೀಯ ಶಾಸಕ ರಹೀಮ್ ಖಾನ್ ಹಾಗೂ ಅವರ ಪುತ್ರ ರಷೀದ್ ಸೇರಿಕೊಂಡು ಗೂಂಡಾಗಿರಿ ಮಾಡಿದ್ದಾರೆಂದು ಆರೋಪಿಸಿ ಬಹಿರಂಗ ಸಭೆಯಲ್ಲಿ ಅವರು ಮಾತನಾಡುತ್ತ, ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ಕೂಡಲೇ ಕೇಸುಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ನಾಳೆಯಿಂದ ಪ್ರತಿ ಶನಿವಾರ ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತೆ ವಿದ್ಯಾರ್ಥಿಗಳಿಗೆ ಕರೆ ಕೊಟ್ಟ ಅವರು, ಹಿಂದೂಗಳನ್ನು ವ್ಯವಸ್ಥಿತವಾಗಿ ತುಳಿಯುತ್ತಿರುವ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಹೇಳಿದರು.

- Advertisement -

ವರದಿ : ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಶಿವಾನಂದ ಮಹಾವಿದ್ಯಾಲಯದಲ್ಲಿ ವರಕವಿ ಬೇಂದ್ರೆಯವರ ೪೩ನೇ ಪುಣ್ಯಸರಣೆ

ಕಾಗವಾಡ: ನಗರದ ಶಿವಾನಂದ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಪ್ರಾಯೋಜಿತ ಕನ್ನಡ ವಿಭಾಗ ವರಕವಿ ಶಬ್ದಗಾರುಡಿಗ ಡಾ. ದ. ರಾ. ಬೇಂದ್ರೆಯವರ ೪೩ನೇ ಪುಣ್ಯಸ್ಮರಣೆಯನ್ನು ಆಯೋಜಿಸಲಾಗಿತ್ತು. ಈ ಸಮಾರಂಭದ ಮುಖ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group