- Advertisement -
ಬೀದರ – ಸ್ವ – ಸಹಾಯ ಸಂಘಗಳ ಸಮಾವೇಶ ಹಾಗೂ ಸಮುದಾಯ ಕಾರ್ಯಕ್ರಮಗಳ ಸೌಲಭ್ಯ ವಿತರಣೆ ಕಾರ್ಯಕ್ರಮ ಭಾಗಿಯಾಗಲು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಬೀದರ ನಗರಕ್ಕೆ ಆಗಮಿಸಿದರು.
ಪುಷ್ಪಾರ್ಚಾನೆ ಮೂಲಕ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಸಾವಿರಾರು ಜನರು ಸಂಭ್ರಮದಿಂದ ಸ್ವಾಗತಿಸಿದರು.
- Advertisement -
ಬೀದರ್ ನ ಭೂಮರೆಡ್ಡಿ ಕಾಲೇಜು ಆವರಣದಲ್ಲಿ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸಿದ್ದಾರೆ.
ಕೇಂದ್ರ ಸಚಿವ ಭಗವಂತ್ ಖೂಬಾ, ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ,ಶಾಸಕರಾದ ಬಂಡೆಪ್ಪ ಖಾಶೆಂಪುರ್, ರಹೀಂಖಾನ್ ಮತ್ತು ವಿವಿಧ ಮಠದ ಮಠಾಧೀಶರು ಹಾಗೂ ವಿವಿಧ ಗ್ರಾಮಗಳ ಸ್ವ – ಸಹಾಯ ಸಂಘಟನೆಯ ಸಾವಿರರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ