spot_img
spot_img

ಶ್ರೀ ಪುಂಡಲೀಕ ಮಹಾರಾಜರ ಪುಣ್ಯಾರಾಧನೆ, ಸಂಭ್ರಮದ ಮೆರವಣಿಗೆ

Must Read

spot_img
- Advertisement -

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆಯ ನಿಮಿತ್ತ ಗುರುವಾರ ಸಂಜೆ ಗ್ರಾಮದಲ್ಲಿ ಶ್ರೀಗಳ ಭಾವಚಿತ್ರದ ಉತ್ಸವದ ಮೆರವಣಿಗೆಯು ಮಹಿಳೆಯರ ಆರತಿ ಮೇಳ ಮತ್ತು  ವಿವಿಧ ವಾದ್ಯಮೇಳ ದೊಂದಿಗೆ ಸಂಭ್ರಮದಿಂದ ಜರುಗಿತು.

ಶ್ರೀಗಾಳೇಶ್ವರ ಮಠದ ಆವರಣದಲ್ಲಿ ಶ್ರೀ ಪುಂಡಲೀಕ ಮಹಾರಾಜರ ಭಾವ ಚಿತ್ರ ಇರುವ ರಥಕ್ಕೆ ಶ್ರೀ ಮಠದ ಅಭಿನವ ಶ್ರೀ ವೆಂಕಟೇಶ ಮಹಾರಾಜರು ಪೂಜೆಸಲ್ಲಿಸಿ ಉತ್ಸವದ ಮೆರವಣಿಗೆಗೆ ಚಾಲನೆ ನೀಡಿದರು.

- Advertisement -

ಮೆರವಣಿಗೆಯು ಶ್ರೀಗಳ ಮನೆಯ ರಸ್ತೆಯ ಮೂಲಕ ಗ್ರಾಮದ ದುರ್ಗಮ್ಮಾ ದೇವಸ್ಥಾನ, ಶಿವಾಜಿ ವೃತ್ತ, ಕನ್ನಡ ಶಾಲೆ, ಗಾಂಧಿ ವೃತ್ತ, ಹನುಮಾನ ದೇವಸ್ಥಾನ ಹಾಗೂ ಬಸ್ ನಿಲ್ದಾಣ ಮೂಲಕ ಶ್ರೀ ಮಠದವರೆಗೆ ನಡೆದ ಮೆರವಣಿಗೆಯ ಸಂದರ್ಭದಲ್ಲಿ ಶ್ರೀಗಳ ಭಾವಚಿತ್ರ ಇರುವ ರಥಕ್ಕೆ ಗ್ರಾಮಸ್ಥರು ಪೂಜೆ ಸಲ್ಲಿಸಿ ನಮಿಸಿದರು.

ಮೆರವಣಿಗೆಯಲ್ಲಿ ತೊಂಡಿಕಟ್ಟಿ ಮತ್ತು, ಬುದ್ನಿ ಖುರ್ದ, ಗುತ್ತಿಗೋಳಿ-ಹೊಸಕೋಟಿ, ಕಮಕೇರಿ, ಕನಸಗೇರಿ, ಕಿಲ್ಲಾಹೊಸಕೋಟಿ, ದಾದನಟ್ಟಿ, ಅಡಿಗಿನಾಳ, ಕಳ್ಳಿಗುದ್ದಿ, ಬಿಸಗುಪ್ಪಿ ಸೇರಿದಂತೆ ವಿವಿಧ ಗ್ರಾಮಗಳ ಭಕ್ತಾದಿಗಳು ಭಾಗವಹಿಸಿದ್ದರು.

- Advertisement -
- Advertisement -

Latest News

ದಲಿತರ ಹಣ ಗ್ಯಾರಂಟಿಗಳಿಗೆ ಬಳಸಿದ ಕಾಂಗ್ರೆಸ್ ; ತನಿಖೆ ಮಾಡಿಸಬೇಕು – ಈರಣ್ಣ ಕಡಾಡಿ ಆಗ್ರಹ

ಮೂಡಲಗಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಮೀಸಲಾದ ಅನುದಾನದ ಹಣವನ್ನು ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸಿಕೊಂಡಿದ್ದು, ಅದು ದಲಿತ...
- Advertisement -

More Articles Like This

- Advertisement -
close
error: Content is protected !!
Join WhatsApp Group