ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಪ್ರಮಾಣ ಪತ್ರ ವಿತರಣೆ

Must Read

ಕರೂರ್ ವೈಶ್ಯ ಬ್ಯಾಂಕ್ ನೆರವಿನ ದಾಲ್ಮಿಯಾ ದೀಕ್ಷಾ ಕೇಂದ್ರ, ಬೆಳಗಾವಿಯಲ್ಲಿ ಕಾರ್ಯಕ್ರಮ

ದಿನಾಂಕ: 22/01/ 2025 ರಂದು ಯಾದವಾಡದ ದಾಲ್ಮಿಯಾ (ಭಾರತ) ಸಿಮೆಂಟ್ ಕಾರ್ಖಾನೆಯ ದಾಲ್ಮಿಯಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ದಾಲ್ಮಿಯಾ ದೀಕ್ಷಾ ಕೌಶಲ್ಯ ಕೇಂದ್ರ ಬೆಳಗಾವಿಯಲ್ಲಿ ಸಹಾಯಕ ಸೌಂದರ್ಯ ಚಿಕಿತ್ಸಕ, ಗ್ರಾಹಕ ಕಾರ್ಯನಿರ್ವಾಹಕ ಮತ್ತು ಸಹಾಯಕ ಎಲೆಕ್ಟ್ರಿಷಿಯನ್ ತರಬೇತಿಗಳನ್ನು ಕರೂರ್ ವೈಶ್ಯ ಬ್ಯಾಂಕ್ ನೆರವಿನೊಂದಿಗೆ ಹಮ್ಮಿಕೊಳ್ಳಲಾಗಿತ್ತು.

ಯಶಸ್ವಿಯಾಗಿ ಪೂರ್ಣಗೊಳಿಸಿದ 100 ಯುವಕರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸತೀಶ್ ಖಾನ್ ಗೌಡರ ವ್ಯವಸ್ಥಾಪಕರು ಕರೂರ್ ವೈಶ್ಯ ಬ್ಯಾಂಕ್ ಬೆಳಗಾವಿ,  ಅಭಿನವ್ ಯಾದವ್, ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕರು, ನಬಾರ್ಡ್, ಶ್ರೀಮತಿ ನಾಗರತ್ನ ಸ ರಾಮನಗೌಡ, ಸಂಸ್ಥಾಪಕರು ಆಶ್ರಯ ಸಂಸ್ಥೆ, ಬೆಳಗಾವಿ ಹಾಗೂ ಅಶ್ವಿನ್ ಕುಮಾರ್. ಡಿ. ಸಿ.ಎಸ್.ಆರ್ ಜನರಲ್ ಮ್ಯಾನೇಜರ್, ದಾಲ್ಮಿಯಾ ಸಿಮೆಂಟ್ ಭಾರತ್ ಲಿಮಿಟೆಡ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ದಾಲ್ಮಿಯಾ ದೀಕ್ಷಾ ಕೌಶಲ್ಯ ಕೇಂದ್ರದ ಹಳೆಯ ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು ಶಿಬಿರಾರ್ಥಿಗಳೊಂದಿಗೆ. ದಾಲ್ಮಿಯಾ ಸಿಮೆಂಟ್ ನ ಬೆಳಗಾವಿ ಸಿ. ಎಸ್. ಆರ್. ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದರು.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group