spot_img
spot_img

Mudalagi: ‘ಸಮಾಜ ಸೇವೆ ಜನರ ಹೃದಯದಲ್ಲಿ ಉಳಿಯಬೇಕು’ – ಪ್ರೊ . ಶೇಖ್

Must Read

- Advertisement -

ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗಿರುತ್ತದೆ’ ಎಂದು ಕೆಸರಗೊಪ್ಪ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್.ಎಂ. ಶೇಖ್ ಹೇಳಿದರು.

ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2023-24ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ನಾವು ಮಾಡುವ ಸಮಾಜ ಸೇವೆಯು ಜನರಿಗೆ ಅಗತ್ಯವಾಗಿರಬೇಕು ಮತ್ತು ಜನರ ಹೃದಯದಲ್ಲಿ ಉಳಿಯುವಂತೆ ಇರಬೇಕು ಎಂದರು.

ದೇಶದಲ್ಲಿ ಕೇವಲ ಸಂವಿಧಾನದ ಹಕ್ಕುಗಳನ್ನು ಪಡೆಯುವುದಕ್ಕೆ ಬದ್ಧತೆ ಇರಬಾರದು. ದೇಶಕ್ಕಾಗಿ ಮಾಡಬೇಕಾದ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಸಹ ಪ್ರಾಮಾಣಿಕವಾಗಿ ಮಾಡುವ ಮೂಲಕ ಸಮಾಜ ಮತ್ತು ದೇಶದ ಹಿತ ಕಾಯುವಂತಾಗಬೇಕು ಎಂದರು.

- Advertisement -

ಲಯನ್ಸ್ ಕ್ಲಬ್‍ವು ನಿಸ್ವಾರ್ಥದಿಂದ ಸಮಾಜ ಸೇವೆ ಮಾಡುವಂಥ ಜಗತ್ತಿನ ಬಹುದೊಡ್ಡ ಸೇವಾ ಸಂಸ್ಥೆಯಾಗಿದೆ. ಮೂಡಲಗಿ ಲಯನ್ಸ್ ಪರಿವಾರದವರು ಕಳೆದ 8 ವರ್ಷಗಳಿಂದ ಸಮಾಜಕ್ಕಾಗಿ ಮಾಡಿರುವ ಕಾರ್ಯಗಳು ಶ್ಲಾಘನೀಯವಾಗಿವೆ ಎಂದರು.

ಜಮಖಂಡಿಯ ಡಾ. ರಂಗಣ್ಣ ಎನ್. ಸೋನವಾಲಕರ ಅವರು ಮೂಡಲಗಿ ಕ್ಲಬ್‍ದ 2023-24ನೇ ಸಾಲಿನ ನೂತನ ಪದಗ್ರಹಣವನ್ನು ಮಾಡಿ ಮಾತನಾಡಿ,  ಜೀವನದಲ್ಲಿ ಕೇವಲ ಹಣ ಗಳಿಕೆ, ಅಧಿಕಾರ ಮುಖ್ಯವಲ್ಲ. ಸಮಾಜದಲ್ಲಿ ಕಷ್ಟದಲ್ಲಿರುವ ವ್ಯಕ್ತಿಗಳಿಗೆ ಸಹಾಯ ಮಾಡುವ ಮೂಲಕ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು ಎಂದರು.

ಲಯನ್ಸ್ ಕ್ಲಬ್‍ವು ಸಂಘಟನೆ, ಒಗ್ಗಟ್ಟು ಹಾಗೂ ಸಮಾಜದಲ್ಲಿ ಬೆರೆಯುವುದನ್ನು ಕಲಿಸಿಕೊಡುತ್ತದೆ ಎಂದರು.  

- Advertisement -

2023-24ನೇ ಸಾಲಿಗೆ ಅಧ್ಯಕ್ಷರಾಗಿರುವ ಶ್ರೀಶೈಲ ಲೋಕನ್ನವರ, ಕಾರ್ಯದರ್ಶಿ ಸುಪ್ರೀತ ಸೋನವಾಲಕರ, ಖಜಾಂಚಿಯಾಗಿರುವ ಕೃಷ್ಣಾ ಕೆಂಪಸತ್ತಿ ಹಾಗೂ ಉಳಿದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಪದಗ್ರಹಣವನ್ನು ನೆರವೇರಿಸಿದರು. 

ನಿರ್ಗಮಿತ ಅಧ್ಯಕ್ಷ ಡಾ. ಎಸ್.ಎಸ್. ಪಾಟೀಲ, ನಿಕಟಪೂರ್ವ ಅಧ್ಯಕ್ಷ ಬಾಲಶೇಖರ ಬಂದಿ, ಕಾರ್ಯದರ್ಶಿ ಸಂಗಮೇಶ ಕೌಜಲಗಿ, ಖಜಾಂಚಿ ಶಿವಬೋಧ ಯರಝರ್ವಿ ವೇದಿಕೆಯಲ್ಲಿದ್ದರು. 

ಮೂಡಲಗಿಯ ಸಾರ್ವಜನಿಕ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟು ಬೆಳೆಸುತ್ತಿರುವ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅನ್ನದಾಸೋಹ ಸೇವೆಗೈದ ದಾನಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಿದರು.

ಸಮಾರಂಭದ ಪೂರ್ವದಲ್ಲಿ ಕಾಲೇಜು ಆವರಣದಲ್ಲಿ ಸಸಿಗಳನ್ನು ನೆಟ್ಟು ವನಮಹೋತ್ಸವಕ್ಕೆ ಚಾಲನೆ ನೀಡಿದರು. 

ವೆಂಕಟೇಶ ಸೋನವಾಲಕರ, ಡಾ. ಪ್ರಕಾಶ ನಿಡಗುಂದಿ, ಎನ್.ಟಿ. ಪಿರೋಜಿ, ಈರಣ್ಣ ಕೊಣ್ಣೂರ, ಪುಲಕೇಶ ಸೋನವಾಲಕರ, ಸುರೇಂದ್ರ ಆದಪ್ಪಗೋಳ, ದುಂಡಪ್ಪ ಕಂಕಣವಾಡಿ, ಡಾ. ಮಲ್ಲಿಕಾರ್ಜುನ ಹಿರೇಮಠ, ವಿಶಾಲ ಶೀಲವಂತ, ಪ್ರಮೋದ ಪಾಟೀಲ, ಅಪ್ಪಣ್ಣ ಬಡಿಗೇರ, ಶಿವಬಸು ಈಟಿ, ಡಾ. ಸಚಿನ ಟಿ, ಡಾ. ಯಲ್ಲಾಲಿಂಗ ಮಳವಾಡ,  ರಾಜಕುಮಾರ ವಾಲಿ, ವೀರಭದ್ರ ಜಕಾತಿ, ಮಹಾಂತೇಶ ಹೊಸೂರ, ಶಿವಾನಂದ ಗಾಡವಿ, ಗಿರೀಶ ಆಸಂಗಿ, ಸುರೇಶ ನಾವಿ, ಸಂದೀಪ ಸೋನವಾಲಕರ, 

ಪವಿತ್ರಾ ಕೊಣ್ಣೂರ ಪ್ರಾರ್ಥಿಸಿದರು, ಡಾ. ತಿಮ್ಮಣ್ಣ ಗಿರಡ್ಡಿ, ಡಾ. ಸಂಜಯ ಶಿಂಧಿಹಟ್ಟಿ ಪರಿಚಯಿಸಿದರು, ಡಾ. ಎಸ್.ಎಸ್. ಪಾಟೀಲ ಸ್ವಾಗತಿಸಿದರು, ಶಿವಾನಂದ ಕಿತ್ತೂರ, ಮಹಾವೀರ ಸಲ್ಲಾಗೋಳ, ಸೋಮಶೇಖರ ಹಿರೇಮಠ ನಿರೂಪಿಸಿದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group