ಬೈಲಹೊಂಗಲ – ಪೆಹಲ್ಗಾಮ್ ಘಟನೆಗೆ ಪ್ರತಿಯಾಗಿ ನಮ್ಮ ದೇಶದ ಸೈನಿಕರು ಆಪರೇಷನ್ ಸಿಂಧೂರ ಹೆಸರಿನಲ್ಲಿ ಉಗ್ರರ ವಿರುದ್ಧ ಯಶಸ್ವಿಯಾಗಿ ಪ್ರತೀಕಾರ ನೀಡಿದ್ದಾರೆ. ಈ ಯಶಸ್ವೀ ಕಾರ್ಯಾಚರಣೆಯ ಹಿಂದಿರುವ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ದೇಶದ ಸೈನಿಕರಿಗೆ ಉಗ್ರರ ವಿರುದ್ಧ ಮುಂದಿನ ದಿನಗಳಲ್ಲಿ ನಡೆಯುವ ಕಾರ್ಯಾಚರಣೆಯಲ್ಲಿ ಯಶಸ್ಸು ಸಿಗಲಿ ಎಂದು ಬಿಜೆಪಿ ವತಿಯಿಂದ ನಗರದ ಲಕ್ಷ್ಮೀ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ,ಮಂಡಲ ಅಧ್ಯಕ್ಷರಾದ ಸುಭಾಷ್ ತುರಮರಿ, ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಜಿಲ್ಲಾ ಸಾಮಾಜಿಕ ಜಾಲತಾಣ ಸದಸ್ಯರಾದ ದಯಾನಂದ ಪರಾಳಶೆಟ್ಟರ, ಮುಖಂಡರಾದ ಶಿವಾನಂದ ಬಡ್ಡಿಮನಿ,ಶಂಭು ಹೂಲಿ, ಗೌಡಪ್ಪ ಹೊಸಮನಿ, ಬಸವರಾಜ ಶಿಂತ್ರಿ, ಪುಂಡಲೀಕ ಇಂಚಲ, ಶ್ರೀನಿವಾಸ ಭರಮಣ್ಣವರ, ಬಸವರಾಜ ಬಡಿಗೇರ, ಸದಾಶಿವಗೌಡ ಪಾಟೀಲ, ಮಲ್ಲಿಕಾರ್ಜುನ ಇಂಚಲ,ಸುಧೀರ ಮಾಳೋದೆ ಹಾಗೂ ಅನೇಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು