spot_img
spot_img

110/11 ಕೆವಿ ವಿದ್ಯುತ್ ಪ್ರಸರಣ ಕೇಂದ್ರದ ಕಾಮಗಾರಿಗೆ ಚಾಲನೆ

Must Read

spot_img
- Advertisement -

ಸಿಂದಗಿ– ತಾಲೂಕಿನ ಗುಬ್ಬೇವಾಡಿ ಗ್ರಾಮದಲ್ಲಿ 110/11ಕೆ. ವಿ. ವಿದ್ಯುತ್ ಪ್ರಸರಣ ಕೇಂದ್ರದ  ಕಾಮಗಾರಿಗೆ ಶಾಸಕ ಅಶೋಕ್ ಮನಗೂಳಿ ಮಂಗಳವಾರ  ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಅವರು ಮಾತನಾಡಿ, ಈ ಭಾಗದ ರೈತರ ಬಹುದಿನಗಳ ಬೇಡಿಕೆಯಾಗಿರುವ ವಿದ್ಯುತ್ ಪ್ರಸರಣ ಕೇಂದ್ರ ಸ್ಥಾಪನೆಯಾಗುತ್ತಿರುವುದು ಸಂತಸ ತಂದಿದೆ. ಇದು ಯಂಕಂಚಿ ಗ್ರಾಮದಿಂದ ಗುಬ್ಬೇವಾಡ ಗ್ರಾಮದವರೆಗೆ 110ಕೆ. ವಿ ಸುಮಾರು 11 ಕಿಲೋಮೀಟರ್ ವರೆಗೆ ವಿದ್ಯುತ್ ಮಾರ್ಗ ನಿರ್ಮಿಸುವುದು ಹಾಗೂ 10 ಎಮ್. ವಿ. ಎ ವಿದ್ಯುತ್ ಪರಿವರ್ತಕ ಅಳವಡಿಸುವ ಕಾಮಗಾರಿ ಒಟ್ಟು 11.64 ಕೋಟಿ ಹಣವನ್ನ ಒಳಗೊಂಡಿರುವ ಕಾಮಗಾರಿ ಇದಾಗಿದೆ. ಇದರ ನಿರ್ಮಾಣದಿಂದ ಈ ಭಾಗ ಸೇರಿದಂತೆ ಸುತ್ತಮುತ್ತ ಅನೇಕ ಗ್ರಾಮಗಳ  ರೈತರಿಗೆ ಅತ್ಯಂತ ಅನುಕೂಲವಾಗಲಿದೆ. ರೈತರ ಪಂಪ್ಸೆಟ್ಟುಗಳಿಗೆ  ದಿನಕ್ಕೆ ಏಳು ಗಂಟೆ ವಿದ್ಯುತ್ ಪೂರೈಕೆ,  ಹೈ ವೋಲ್ಟೇಜ್ ವಿದ್ಯುತ್ ಪೂರೈಕೆ ಈ ಕೇಂದ್ರದಿಂದ ನೆರವೇರಲಿದೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.

ಈ ವೇಳೆ ಸಂಸದ ರಮೇಶ್ ಜಿಗಜಿಣಗಿ, ಮಾಜಿ ಶಾಸಕ ರಮೇಶ್ ಭೂಸನೂರ ಮಾತನಾಡಿ, ವಿದ್ಯುತ್ ಪ್ರಸರಣ ಕೇಂದ್ರ ನಿರ್ಮಾಣದಿಂದ ಹೆಚ್ಚು ಅನುಕೂಲವಾಗಲಿದೆ. ರೈತರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಮಾತನಾಡಿದರು.

- Advertisement -

ಕಾರ್ಯಕ್ರಮದಲ್ಲಿ ಬಾಗಲಕೋಟದ ಕೆಪಿಟಿಸಿಎಲ್ ಅಧಿಕಾರಿಗಳಾದ ಕೆ. ಜಿ. ಹಿರೇಮಠ್, ಜಿ. ಕೆ. ಗೋಟ್ಯಾಳ, ವಿಜಯಪುರದ ಕೆಪಿಟಿಸಿಎಲ್ ಅಧಿಕಾರಿಗಳಾದ ಸುನಂದಾ ಜಂಬಗಿ, ಪ್ರಭು ಭಾಗವಹಿಸಿದ್ದರು.

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group