ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಕರ್ನಾಟಕ ಸರ್ಕಾರ ಬೆಂಗಳೂರು ವತಿಯಿಂದ ವಾರ್ಷಿಕ ರಾಜ್ಯ ಪ್ರಶಸ್ತಿಯನ್ನು ದಿನಾಂಕ 27.03.2025ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರು ಎ. ಆರ್. ಗೋವಿಂದಸ್ವಾಮಿರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪನವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸುಮಾರು 25 ವರ್ಷಗಳಿಂದ ಜಾನಪದ ಕ್ಷೇತ್ರ ಮತ್ತು ಬಂಜಾರ ಗಾಯನ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ದಾವಣಗೆರೆ ತಾಲೂಕು ಚಿನ್ನಸಮುದ್ರ ಗ್ರಾಮದ ಹೆಮ್ಲ ನಾಯ್ಕ್ ಮತ್ತು ಲಕ್ಷ್ಮಿ ಬಾಯಿ ದಂಪತಿಗಳ ಸುಪುತ್ರರು ಸಿ.ಹೆಚ್.ಉಮೇಶ ನಾಯ್ಕ್ ಇವರಿಗೆ ವಾರ್ಷಿಕ ರಾಜ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.
ಇವರ ಜಾನಪದ ಕ್ಷೇತ್ರದ ಸಾಧನೆಗೆ ಸಂದ ರಾಜ್ಯ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷರಾದ ಮಧು ನಾಯ್ಕ್ ಲಂಬಾಣಿ, ಗೌರವ ಅಧ್ಯಕ್ಷರು ಸಾಹಿತಿ ಗೊರೂರು ಅನಂತರಾಜು ಅಭಿನ೦ದಿಸಿ ಇವರಿಂದ ಇನ್ನೂ ಹೆಚ್ಚಿನ ಜಾನಪದ ಗಾಯನ ಸಾಧನೆ ಹೊರ ಹೊಮ್ಮಲಿ ಎಂದು ಶುಭ ಹಾರೈಸಿದ್ದಾರೆ.