ರಾಜ್ಯ ಮಟ್ಟದ ಗಜಲ್ ಸಮ್ಮೇಳನ – ಡಾ. ಸುರೇಶ ನೆಗಳಗುಳಿಯವರಿಂದ ಗೋಷ್ಠಿ ಚಾಲನೆ

Must Read

ಮಂಗಳೂರು – ಕರ್ನಾಟಕ ಗಜಲ್ ಅಕಾಡೆಮಿ ಹಾಗೂ ಗುಲ್ಬರ್ಗ ವಿ.ವಿಯಿಂದ ಆ. 25 ರಂದು ಅಖಿಲ‌ ಕರ್ನಾಟಕ ಪ್ರಥಮ ಗಜಲ್ ಸಮ್ಮೇಳನವು ಕಲಬುರ್ಗಿಯಲ್ಲಿ ನಡೆಯಲಿದೆ.

ಗಜಲ್ ಗಾರುಡಿಗ ಶಾಂತರಸರ ಹೆಸರಿನ ವೇದಿಕೆಯಲ್ಲಿ ನಡೆಯುವ ಈ ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಗಜಲ್ ಕಾರ್ತಿ ಪ್ರಭಾವತಿ ದೇಸಾಯಿ ಯವರು ವಹಿಸಲಿರುವರು.

ಈ ಗಜಲ್ ಸಮ್ಮೇಳನವನ್ನು ಸಂಸದ ರಾಧಾಕೃಷ್ಣ ದೊಡ್ಡಮನಿ ಉದ್ಘಾಟಿಸಲಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳ ಗಜಲ್ ಕವಿಗಳು ಭಾಗವಹಿಸುವ ಈ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಮಂಗಳೂರಿನ ವೈದ್ಯ ಹಾಗೂ ಬರಹಗಾರ ಡಾ.ಸುರೇಶ ನೆಗಳಗುಳಿ ಯವರು ಕರ್ನಾಟಕದಲ್ಲಿ ಗಜಲ್ ನಡೆದು ಬಂದ ಹಾದಿ ಎಂಬ ಗೋಷ್ಢಿಯ ಚಾಲನೆ ನೀಡಲಿದ್ದಾರೆ ಹಾಗೂ ಖ್ಯಾತ ಕವಿ ಹಾ.ಮ.ಸತೀಶರವರು ಭಾಗವಹಿಸುವರು ಎಂದು ಸಮ್ಮೇಳನದ ಸಂಚಾಲಕ ಮಹೀಪಾಲ ರೆಡ್ಡಿ ಮುನ್ನೂರ್ ತಿಳಿಸಿರುತ್ತಾರೆ.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group