ಬಸವನಗುಡಿ ಶಾಲೆಗೆ ರಾಜ್ಯ ಮಟ್ಟದ ಉತ್ತಮ ಶಾಲೆ ಗೌರವ ಪ್ರಶಸ್ತಿ

Must Read

ಸವದತ್ತಿ ಃ ತಾಲೂಕಿನ ಯರಗಟ್ಟಿ ಸಮೀಪದ ಬಸವನಗುಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ್ ಸಹಯೋಗದಲ್ಲಿ ಜರುಗಿದ ಕರ್ನಾಟಕ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಉತ್ತಮ ಶಾಲೆ ಪ್ರಶಸ್ರಿ ನೀಡಲಾಯಿತು.

ಆರೂಢ ಭಾರತಿ ಸ್ವಾಮೀಜಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್,ಉಪಾಧ್ಯಕ್ಷ ಟಿ.ತ್ಯಾಗರಾಜು, ಕಾವ್ಯಶ್ರೀ ಚಾರಿಟೆಬಲ್ ಅಧ್ಯಕ್ಷ ಜಿ.ಶಿವಣ್ಣ, ಚೇತನ ಪೌಂಡೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ, ಭಾಷಾ ಅಲ್ಪಸಂಖ್ಯಾತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎಲ್.ಐ.ಲಕ್ಕಮ್ಮನವರ, ಸಾಹಿತಿ ಪಂಡಿತ ಅವುಜಿ, ಅಪ್ನಾದೇಶ ಸಂಘಟನೆಯ ರಾಜ್ಯಾಧ್ಯಕ್ಷ ವೈ.ಬಿ.ಕಡಕೋಳ, ಡಾ.ವೀಣಾ, ಲೂಸಿ ಸಾಲ್ಡಾನಾ, ನಟ ಚಿಕ್ಕ ಹೆಜ್ಜಾಜೆ ಮಹದೇವ ಮೊದಲಾದವರ ಸಮ್ಮುಖದಲ್ಲಿ ರಾಜ್ಯ ಮಟ್ಟದ ಉತ್ತಮ ಶಾಲೆ ಪ್ರಶಸ್ತಿಯನ್ನು ಶಾಲೆಯ ಮುಖ್ಯ ಶಿಕ್ಷಕ ವಿಜಯಕುಮಾರ ಮೆಳವಂಕಿಯವರಿಗೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಲಿಕಲಿ ವಿಷಯದ ರಾಜ್ಯಮಟ್ಟದ ಸಂಪನ್ಮೂಲ ಶಿಕ್ಷಕ ಮನೋಹರ ಚೀಲದ ಸವದತ್ತಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿ ಶಿವಾನಂದ ಮಿಕಲಿ, ಶಿಕ್ಷಕರಾದ ಎಲ್ ಎಂ ಕುಮಕಾಗೋಳ, ಟಿ.ಬಿ.ಚೌರಡ್ಡಿ, ಗುರು,ಕೊಳವಿ ಮೊದಲಾದವರು ಉಪಸ್ಥಿತರಿದ್ದರು.

ಚಂದ್ರಶೇಖರ ಮಾಡಲಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಜಿ.ಶಿವಣ್ಣ ಸ್ವಾಗತಿಸಿದರು.

- Advertisement -
- Advertisement -

Latest News

ಕವನ : ಸಮರದ ಮಾತು

ಸಮರದ ಮಾತು ಅದೆಷ್ಟು ಇವೆ ನಿನ್ನ ಮಾತಿನ ಸಮರದ ಬಾಣಗಳು ಎದೆಯ ಗುಂಡಿಗೆಯನು ಸೀಳಿ ನಿಂತಿವೆವೀರ ಪರಾಕ್ರಮದ ಕೂಸೂ ನಾನಲ್ಲ ನಿನ್ನ ಜೊತೆ ಹೋರಾಡಿ ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ ಕಿತ್ತು ಕೊಂಡ ವೀರ ಯೋಧ ಮಾತಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group