ಐಗಿನ ಬೈಲು (ಸಾಗರ ) : 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ , ಸಾಗರ ತಾಲೂಕು ಶಿವಮೊಗ್ಗ ಜಿಲ್ಲೆ ಯ ಐಗಿನ ಬೈಲು ಶಾಲೆಯ ಆವರಣದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೇರಿಯಪ್ಪ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ,ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು .
ರಾಷ್ಟ್ರೀಯ ಹಬ್ಬ ಗಳಲ್ಲಿ ಮಕ್ಕಳ ತಾಯಿಂದಿರು ಭಾಗವಹಿಸಿ : ಭಾರತೀ ಮೇಡಂ
ಭಾರತವು 200 ವರ್ಷಗಳ ಬ್ರಿಟಿಷ್ ಆಳ್ವಿಕೆಯಿಂದ ಮುಕ್ತವಾದ ದಿನ 1947 ಆಗಸ್ಟ್ 15. ಅಂದು ಭಾರತವು ಪ್ರಜಾಸತ್ತಾತ್ಮಕ ರಾಷ್ಟ್ರವಾಗಿ ನಿರ್ಮಾಣವಾಯಿತು. ಹೀಗಾಗಿ, ಆಗಸ್ಟ್ 15 ನಮಗೆ ಅತ್ಯಂತ ಪ್ರಮುಖವಾದ ದಿನ. ನಮ್ಮ ದೇಶವನ್ನು ಬ್ರಿಟಿಷರ ಕಪಿಮುಷ್ಟಿಯಿಂದ ಮುಕ್ತಗೊಳಿಸಲು..ವೀರ ಸ್ವಾತಂತ್ರ್ಯ ಹೋರಾಟಗಾರರು ಶ್ರಮಿಸಿದ್ದಾರೆ ಅದರಿಂದ ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಕ್ಕಳ ತಾಯಂದಿರು ಭಾಗವಹಿಸಿ ರಾಷ್ಟ್ರೀಯ ಹಬ್ಬಗಳಲ್ಲಿ ಭಾರತದ ಭವ್ಯ ಸಂಸ್ಕೃತಿ ಮತ್ತು ಪರಂಪರೆಯನ್ನು ಅನುಸರಿಸುವ ಪದ್ಧತಿಯನ್ನು ಮಕ್ಕಳು ಹಾಗು ಪೋಷಕರು ರೂಡಿಸಿಕೊಳ್ಳಬೇಕು ಹಾಗು ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ವನ್ನು ತಾಯಂದಿರು ಮಾಡಬೇಕು ಎಂದು 79ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ ಮೇಡಂ ನುಡಿದರು.
ಗ್ರಾಮ ಪಂಚಾಯ್ತಿ ಹಾಗು ಸ್ಥಳೀಯರು ನೀಡಿದ್ದ ಸಿಹಿ ಯನ್ನು ಮಕ್ಕಳಿಗೆ 79 ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ವಿತರಣೆ ಮಾಡಲಾಯಿತು , ಶಾಲೆಯ ಶಿಕ್ಷಕ ವೃಂದದವರಿಂದ ಮಕ್ಕಳಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿತ್ತು
ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗು ಭಾಷಣ ಮತ್ತು ದೇಶ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮದೊಂದಿಗೆ 79 ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಹಾಗು ಸಂಭ್ರಮದಿಂದ ಆಚರಿಸಲಾಯಿತು.
79 ನೇ ಸ್ವಾತಂತ್ರ್ಯೋತ್ಸವದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ಪೋಷಕರು ಮತ್ತು ಅಂಗನವಾಡಿಯಿಂದ 5 ನೇ ತರಗತಿಯವರೆಗಿನ ಎಲ್ಲ ಮಕ್ಕಳು ಹಾಗು ಹಲವು ಗಣ್ಯರು ಹಾಗು ಸಂಸ್ಥೆಯ ಸಿಬ್ಬಂದಿ ಉತ್ಸಾಹದಿಂದ ಪಾಲ್ಗೊಂಡಿದ್ದರು.
ವರದಿ : ತೀರ್ಥಹಳ್ಳಿ ಅನಂತ ಕಲ್ಲಾಪುರ

