spot_img
spot_img

ವಿದ್ಯಾರ್ಥಿಗಳು ಸಾಹಿತ್ಯಾಭಿಮಾನಿ, ಭಾಷಾಭಿಮಾನಿಗಳಾಗಬೇಕು- ಡಾ. ಮಿರಾಜ್ ಪಾಷಾ

Must Read

spot_img
- Advertisement -

ಸಿಂದಗಿ: ಕನ್ನಡ ಭಾಷಾಭಿಮಾನದ ಜೊತೆಗೆ ಬದುಕಿನಲ್ಲಿ ನಿರಂತರ ಅಧ್ಯಯನ ಸಾತ್ವಿಕ ಹೋರಾಟ ಮಾಡಿದರೆ ಗುರಿಮುಟ್ಟಲು ಸಾಧ್ಯ. ವಿದ್ಯಾರ್ಥಿಜೀವನದಲ್ಲಿ ಸಾಹಿತ್ಯ ಓದುವುದು ಹಾಗೂ ಬರೆಯುವುದನ್ನೂ ರೂಢಿಸಿಕೊಳ್ಳಬೇಕು. ಅಂದಾಗ ಮಾತ್ರ ಸಾಹಿತ್ಯಾಭಿಮಾನ ಹಾಗೂ ಭಾಷಾಭಿಮಾನ ಮೂಡುತ್ತದೆ ಎಂದು ಪ್ರಾಧ್ಯಾಪಕ ಡಾ. ಮಿರಾಜ್ ಪಾಷಾ ಹೇಳಿದರು.

ಪಟ್ಟಣದ ಪಿ.ಇ.ಎಸ್ ಸಂಸ್ಥೆಯಲ್ಲಿ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ  ಮಾತನಾಡಿ, ಕನ್ನಡ ನಾಡಿನಲ್ಲಿ ಹಲವಾರು ಸಂತ ಶರಣರು, ವೀರಶೂರರು ನೆಲೆಸಿ ಹೋಗಿದ್ದಾರೆ ಅಂತಹ ವ್ಯಕ್ತಿಗಳ ಮಾರ್ಗದಲ್ಲಿ ನಾವು ಸಾಗುತ್ತಾ ನಾಡು ನುಡಿಯನ್ನು ಉಳಿಸಿಕೊಂಡು ಹೋಗಬೇಕಾಗಿರುವದು ನಮ್ಮೆಲ್ಲರ ಕರ್ತವ್ಯವಾಗಿದೆ.

ಸಮಾರಂಭದ ಉದ್ಘಾಟನೆಯನ್ನು ಎಂ.ಜೆ.ಎಫ್. ಲಾಯಿನ್ ಕೆ.ಎಚ್. ಸೋಮಾಪೂರ ಉದ್ಘಾಟಿಸಿದರು. 

- Advertisement -

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಬಿ.ಪಿ. ಕರ್ಜಗಿಯವರು ವಹಿಸಿದ್ದರು. ಹಿರಿಯ ಉಪನ್ಯಾಸಕರಾದ ಪಿ.ಎಮ್. ಮಡಿವಾಳರ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್. ಕಡಣಿ, ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಬಿ. ಗೋಡಕರ ಉಪನ್ಯಾಸಕಿಯರಾದ ಎಂ.ಎಸ್. ಶ್ರೀಗಿರಿ, ಉಪಸ್ಥಿತರಿದ್ದರು. ಕು. ನಿಂಗಮ್ಮ ನಾಟೀಕಾರ ನಿರೂಪಿಸಿದರು.

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group